ಬೆಂಗಳೂರು : ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು. ಈ ಪ್ರತಿಭಟನೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ ಅತ್ಯಾಚಾರ ಆರೋಪಿ ಮುನಿರತ್ನ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಗೆ ಪ್ರತಿಯಾಗಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ್ದು. ಈ ಪ್ರತಿಭಟನೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ‘ಕೇಂದ್ರ ಸರ್ಕಾರ ಎಲ್ಲದರ ಬೆಲೆ ಏರಿಕೆ ಮಾಡುತ್ತಿದೆ. ಯಾವ ಮಹಿಳೆ ಕೂಡ ಚಿನ್ನದ ಮಾಂಗಲ್ಯ ಸರ ತೆಗೆದುಕೊಳ್ಳಲು ಆಗ್ತಾ ಇಲ್ಲ, ಚಿನ್ನದ ಬೆಲೆ ಏರಿಕೆ ಆಗಿದೆ. ಇದರ ಕುರಿತು ಜನಾಕ್ರೋಶ ಆಗಬೇಕಿದೆ ಎಂದು ಹೇಳಿದರು. ಇದನ್ನೂ ಓದಿ :ಪೀಣ್ಯ ಫ್ಲೈಓವರ್ ಮೇಲೆ ಹೊತ್ತಿ ಉರಿದ ಲಾರಿ; ವಾಹನ ಸಂಚಾರಕ್ಕೆ ನಿರ್ಬಂಧ
ಭಾಷಣದ ವೇಳೆ ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡ ಡಿಕೆ. ” ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನರು ಚುನಾವಣೆಯಲ್ಲಿ ಸೋಲಿಸಿದ್ದಾರೆ. ಕುಮಾರಸ್ವಾಮಿ ನನ್ನ ವಿರುದ್ದ ಟನ್ಗಟ್ಟಲೆ ದಾಖಲೆ ಇದೆ ಎಂದು ಹೇಳಿದ್ದಾರೆ. ನಮ್ಮ ಹುಡುಗರು ಲಾರಿ ಕಳಿಸುತ್ತಾರೆ. ಅದರಲ್ಲಿ ನಿಮ್ ಟನ್ಗಟ್ಟಲೆ ದಾಖಲೆಯನ್ನ ತುಂಬಿ ಕಳುಹಿಸಿ. ನೀವು ಹಾಕುವ ಈ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ ಎಂದು ಹೇಳಿದರು.
ಇದನ್ನು ಓದಿ :ನಾವು ಪಾಕಿಸ್ತಾನದಲ್ಲಿದ್ದೇವೋ? ಭಾರತದಲ್ಲಿದ್ದೇವೋ? ಎಂಬ ಸಂಶಯ ಮೂಡಿದೆ: ವಿಜಯೇಂದ್ರ
ಮುಂದುವರಿದು ಮಾತನಾಡಿದ ಡಿಕೆಶಿ ಮುನಿರತ್ನನ ಮೇಲೂ ಹರಿಹಾಯ್ದಿದ್ದು. ‘ ಅವನ್ಯಾವನೋ ಚಂಗ್ಲು ನಮ್ಮ ವಿರುದ್ದ ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾನೆ. ವಿಧಾನಸೌದದಲ್ಲಿ ರೇಪ್ ಮಾಡಿರುವುದು ಸಾಭೀತಾಗಿದೆ ಎಂದು ಹೆಸರೇಳದೆ ಡಿಕೆಶಿ ಮುನಿರತ್ನನ ವಿರುದ್ದ ವಾಗ್ದಾಳಿ ನಡೆಸಿದರು.