Tuesday, May 13, 2025

ಪಹಲ್ಗಾಮ್ ಉಗ್ರ​ ದಾಳಿಗೆ ಭಾರತೀಯ ಕ್ರಿಕೆಟಿಗರಿಂದ ಖಂಡನೆ..!

ದೆಹಲಿ : ನಿನ್ನೆ (ಏ.22) ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನ ಪ್ರವಾಸಿಗರು ಸಾವನ್ನಪ್ಪಿದ್ದು. ಘಟನೆ ಭಾರತ ಕ್ರಿಕೆಟ್​ ತಂಡ ಆಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2019ರ ನಂತರ ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ ಎಂದು ಇದನ್ನು ವಿಶ್ಲೇಷಿಸಿದ್ದು. ಘಟನೆ ಕುರಿತು ದೇಶದೆಲ್ಲಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ಭಾರತೀಯ ಕ್ರಿಕೆಟಿಗ ಶುಭಮನ್​ ಗಿಲ್​, ಭಾರತ ತಂಡದ ಮುಖ್ಯ ಕೋಚ್​ ಗೌತಮ್​ ಗಂಭೀರ, ಪಾರ್ಥಿವ ಪಟೇಲ್​, ಯುವರಾಜ್​ ಸಿಂಗ್​, ಸೌರವ್​ ಗಂಗೂಲಿ ಸೇರಿದಂತೆ ಅನೇಕ ಕ್ರಿಕೆಟಿಗರು ಘಟನೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶುಭಮನ್​ ಗಿಲ್​ ಟ್ವಿಟ್​ ಮಾಡಿದ್ದು. ‘”ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಬಗ್ಗೆ ಕೇಳಿ ಹೃದಯ ವಿದ್ರಾವಕವಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿಯನ್ನ ಆ ದೇವರು ನೀಡಲಿ. ಈ ರೀತಿಯ ಹಿಂಸಾಚಾರಕ್ಕೆ ನಮ್ಮ ದೇಶದಲ್ಲಿ ಸ್ಥಾನವಿಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ :ಉಗ್ರ ದಾಳಿಯಲ್ಲಿ ಮೃತಪಟ್ಟ ಪ್ರವಾಸಿಗರಿಗೆ ಶ್ರದ್ದಾಂಜಲಿ ಸಲ್ಲಿಸಿದ ಗೃಹ ಸಚಿವ ಅಮಿತ್​ ಶಾ

ಇನ್ನು ಘಟನೆ ಕುರಿತು ಭಾರತ ತಂಡದ ಮುಖ್ಯ ಕೋಚ್​​ ಗೌತಮ್​ ಗಂಭೀರ ಈ ಕುರಿತು ಎಕ್ಷ್​ನಲ್ಲಿ ಬರೆದುಕೊಂಡಿದ್ದು. “ಘಟನೆಯಲ್ಲಿ ಮೃತಪಟಟ ಕುಟುಂಬದವರಿಗೆ ಸಂತಾಪ ಸೂಚಿಸುತ್ತೇನೆ. ಈ ಘಟನೆಗೆ ಕಾರಣರಾದವರ ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ” ಎಂದು ಬರೆದುಕೊಂಡಿದ್ದಾರೆ. ಭಾರತ ತಂಡದ ಮಾಜಿ ನಾಯಕ ಸೌರವ್​ ಗಂಗೂಲಿ ಇದಕ್ಕೆ ಖಂಡನೆ ವ್ಯಕ್ತಪಡಿಸಿದ್ದು. ಘಟನೆಗೆ ಕಾರಣರಾದವರ ವಿರುದ್ದ ಭಾರತ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೂ ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ :ಸೈಫುಲ್ಲಾ ಖಾಲಿದ್​: ಪಹಲ್ಗಾಮ್​ ಉಗ್ರದಾಳಿಯ ಹಿಂದಿನ ಮಾಸ್ಟರ್​ ಮೈಂಡ್​ ಹಿನ್ನಲೆ ಏನು..?

RELATED ARTICLES

Related Articles

TRENDING ARTICLES