Thursday, August 28, 2025
HomeUncategorizedಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್​ಸಿಯ ಸಂಬಂಧಿಯಿಂದ ಫೈರಿಂಗ್

ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್​ಸಿಯ ಸಂಬಂಧಿಯಿಂದ ಫೈರಿಂಗ್

ಚಿಕ್ಕಬಳ್ಳಾಪುರ : ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶ್​ ಕುಮಾರ್​ ಎಂಬಾತ ಫೈರಿಂಗ್ ಮಾಡಿದ್ದು. ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಚಿಕನ್​ ರವಿ ಎಂಬಾತನಿಗೆ ಗುಂಡೇಟು ತಗುಲಿ ಗಾಯವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಘಟನೆ ನಡೆದಿದ್ದು. ಕಲ್ಲು ಕ್ವಾರಿ ಕ್ರಷರ್​ಗೆ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರು. ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಸಿನಿಮೀಯ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ :ಇಂದು ಸುಮ್ಮನೆ ಕುಳಿತುಕೊಳ್ಳುವ ಸಮಯವಲ್ಲ, ತಕ್ಕ ಉತ್ತರ ಕೊಡುವ ಸಮಯ: ನಟ ಸುದೀಪ್​

ಸಕಲೇಶಕುಮಾರ್ ಅಟ್ಟಾಡಿಸಿ ಮೂರು ಸುತ್ತು ಗುಂಡು ಹಾರಿಸಿದ್ದು, ಒಂದು ಗುಂಡು ರವಿ ಅವರ ದೇಹದ ಒಳಗೆ ಹೊಕ್ಕಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ರವಿ ಅವರನ್ನು ದಾಖಲಿಸಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕುಶಲ್ ಹಾಗೂ ದೀಪ್ತಿ ಎನ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಸಕಲೇಶಕುಮಾರ್​ನನ್ನು ಮಂಚೇನಹಳ್ಳಿ ಠಾಣೆ ಪೊಲೀಸರು  ಬಂಧಿಸಿದ್ದಾರೆ. ಸಕಲೇಶ ಕುಮಾರ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಮಂಚೇನಹಳ್ಳಿ ಪೊಲೀಸ್ ಠಾಣೆ ಮುಂದೆ ಸ್ಥಳಿಯರು ಪ್ರತಿಭಟನೆ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments