Monday, April 28, 2025

‘ಒಂದೇ ಒಂದು ಸಭೆ ಮಾಡಲು ಬಿಡಲ್ಲ’; ಬಿಜೆಪಿ ವಿರುದ್ದ ಪ್ರತಿಜ್ಞೆ ಕೈಗೊಂಡ ಕಾಂಗ್ರೆಸ್​​

ಬೆಳಗಾವಿ : ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪುಬಟ್ಟೆ ತೋರಿಸಿ ಅಡ್ಡಿಪಡಿಸಿದ ಕುರಿತು ಮಾತನಾಡಿದ ಡಿಸಿಎಂ ಡಿಕೆಶಿ ‘ರಾಜ್ಯದಲ್ಲಿ ಬಿಜೆಪಿ ಒಂದೇ ಒಂದು ಸಭೆ ಮಾಡಲು ಬಿಡಲ್ಲ, ಇದು ಕಾಂಗ್ರೆಸ್​ನ ಶಪಥ ಎಂದು ಪ್ರತಿಜ್ಞೆ ಕೈಗೊಂಡರು.

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪುಬಟ್ಟೆ ತೋರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅಲ್ಲಿದ್ದ ಪೊಲೀಸರ ಮೇಲೆ ಗರಂ ಆದರು. ಇದರ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಡಿಸಿಎಂ ಡಿಕೆಶಿ ‘ಬಿಜೆಪಿ ನಾಯಕರಿಗೆ ಹೇಳಲು ಬಯಸುತ್ತೇನೆ. ರಾಜ್ಯದಲ್ಲಿ ಬಿಜೆಪಿಯವರಿಗೆ ಒಂದೇ ಒಂದು ಸಭೆ ಮಾಡಲು ಬಿಡಲ್ಲ.ಇದು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ.

ಇದನ್ನೂ ಓದಿ:ಯತ್ನಾಳ್ ಪೈಗಂಬರ್​ ಅವರ ಕಾಲಿನ ಧೂಳಿಗೂ ಸಮವಲ್ಲ: ವಿಜಯಾನಂದ ಕಾಶಪ್ಪನವರ್​

ಇದೇ ವರ್ತನೆಯನ್ನು ಬಿಜೆಪಿ ಕಾರ್ಯಕರ್ತರು ಮುಂದುವರಿಸಿದರೆ ಹುಷಾರ್​, ನಿಮಗಿಂತ ತುಂಬಾ ಚೆನ್ನಗಿ ಕಾರ್ಯರೂಪ ಮಾಡೋ ಶಕ್ತಿ ಜನ ನನಗೆ ಕೊಟ್ಟಿದ್ದಾರೆ. ಇದೇ ವರ್ತನೆಯನ್ನು ಮುಂದುವರಿಸಿದರೆ ಸರಿ ಇರಲ್ಲ. ಬಿಜೆಪಿ ಕಾರ್ಯಕರ್ತರಿಗೆ ಬುದ್ದಿವಾದ ಹೇಳಿದರೆ ಸರಿ, ಇದರು ವಾರ್ನಿಂಗ್​ ಎಂದು ಡಿಕೆಶಿ ಹೇಳಿದರು.

RELATED ARTICLES

Related Articles

TRENDING ARTICLES