Saturday, May 3, 2025

ರಾಯಚೂರು, ಚಾಮರಾಜನಗರ ಜಿಲ್ಲಾಧಿಕಾರಿ ಕಛೇರಿಗಳಿಗೆ ಬಾಂಬ್​ ಬೆದರಿಕೆ..!

ರಾಯಚೂರು ಮತ್ತು ಚಾಮರಾಜನಗರ ಜಿಲ್ಲೆಗಳ ಜಿಲ್ಲಾಧಿಕಾರಿ ಕಛೇರಿಗಳಿಗೆ ಬಾಂಬ್​ ಬೆದರಿಕೆ ಬಂದಿದೆ ಎಂಬ ಎರಡು ಪ್ರತ್ಯೇಕ ವರದಿಗಳು ಬಂದಿದ್ದು. ಈ- ಮೇಲ್​ ಮೂಲಕ ಬಾಂಬ್​ ಬೆದರಿಕೆ ಹಾಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸಿಬ್ಬಂದಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ:ಯತ್ನಾಳ್ ಸವಾಲ್ ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಶಿವಾನಂದ ಪಾಟೀಲ್

ಮೊದಲಿಗೆ ರಾಯಚೂರು ಜಿಲ್ಲಾಧಿಕಾರಿ ಕಛೇರಿಗೆ ಬಾಂಬ್​ ಬೆದರಿಕೆ ಬಂದಿದ್ದು. ಈ- ಮೇಲ್​ ಮೂಲಕ ಬಾಂಬ್​ ಬೆದರಿಕೆ ಕರೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಕಛೇರಿ ಸಿಬ್ಬಂದಿಗಳು ಕಛೇರಿಯಿಂದ ಹೊರ ಬಂದಿದ್ದು. ವಿಷಯ ತಿಳಿದು ಸಿಬ್ಬಂದಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳದ ಸಿಬ್ಬಂದಿಗಳು ಬಂದು ತಪಾಸಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಸ್ಪೀಕರ್​ ಖಾದರ್​ ಜೊತೆಗೆ ನನಗೂ ಬೆದರಿಕೆ ಕರೆಗಳು ಬರುತ್ತಿವೆ: ಸಿಎಂ ಸಿದ್ದರಾಮಯ್ಯ

ರಾಯಚೂರು ಕಛೇರಿ ಮುಂಭಾಗ ಬಾಂಬ್​ ಸ್ಕ್ವಾಡ್​ನಿಂದ ತಪಾಸಣೆ

ಚಾಮರಾಜನಗರ ಜಿಲ್ಲಾಧಿಕಾರಿ ಕಛೇರಿಗೆ ಬೆದರಿಕೆ..!

ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೂ ಕೂಡ ಬಾಂಬ್ ಬೆದರಿಕೆ ಬಂದಿದ್ದು. ಪೈಪ್ ಬಾಂಬ್ ಮೂಲಕ ಜಿಲ್ಲಾಡಳಿತ ಭವನ ಸ್ಫೋಟಿಸುತ್ತೇವೆ ಎಂಬ ಈ-ಮೇಲ್ ಬಂದಿದೆ. ತಮಿಳುನಾಡಿನ ಕೊಯಮತ್ತೂರು ಬಾಂಬ್ ಬ್ಲಾಸ್ಟ್​ ಮಾದರಿಯಲ್ಲಿ ದಾಳಿ ನಡೆಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ
ಎಲ್ಲಾ ಸಿಬ್ಬಂದಿಗಳನ್ನು ಹೊರಕ್ಕೆ ಕಳುಹಿಸಲಾಗಿದ್ದು. ಬಾಂಬ್ ಪತ್ತೆ ದಳ, ಶ್ವಾನದಳದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ಬೆದರಿಕೆಯಿಂದ ಜಿಲ್ಲಾಡಳಿತ ಭವನ ಆವರಣದಲ್ಲಿ ಆತಂಕ ನಿರ್ಮಾಣವಾಗಿದೆ.

RELATED ARTICLES

Related Articles

TRENDING ARTICLES