ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಇಂದು (ಶುಕ್ರವಾರ) ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ. ಬಂದ್ ಹಿನ್ನಲೆ ಉಡುಪಿ-ಮಂಗಳೂರು ನಡುವೆ ಸಂಚರಿಸುವ ಖಾಸಗಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ನಿನ್ನೆ ರಾತ್ರಿ ತನ್ನ ಕಾರ್ನಲ್ಲಿ ಬಜ್ಪೆಗೆ ಬರುತ್ತಿದ್ದ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳ ಗುಂಪೊಂದು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿತ್ತು. ಇದೀಗ ಘಟನೆಗೆ ಎಲ್ಲಡೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು. ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ದಕ್ಷಿಣ ಬಂದ್ಗೆ ಕರೆ ನೀಡಿವೆ. ಈ ಬಗ್ಗೆ ವಿಹೆಚ್ಪಿ ದಕ್ಷಿಣ ಪ್ರಾಂತ ಕಾರ್ಯವಾಹಕ ಶರಣ್ ಪಂಪ್ ವೆಲ್ ತಮ್ಮ ಫೇಸ್ಬುಕ್ ಪುಟದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ :ನಮಗಾದ ನಷ್ಟಕ್ಕೆ ಪ್ರತಿಕಾರ ಖಚಿತ: ಉಗ್ರರಾಷ್ಟ್ರಕ್ಕೆ ಅಮಿತ್ ಶಾ ಎಚ್ಚರಿಕೆ
ಉದ್ರಿಕ್ತ ಗುಂಪು ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದು. ಇದರಿಂದ ದಕ್ಷಿಣ ಕನ್ನಡ ಬೂದಿ ಮುಚ್ಚಿದ ಕೆಂಡದಂತಾಗಿದೆ. ಉಡುಪಿಯಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ್ದು. ಬೆಳಿಗ್ಗೆ ಕೆಲ ಸಮಯ ಕಾರ್ಯನಿರ್ವಹಿಸಿದ ಬಸ್ಗಳು ನಂತರ ಸಂಚಾರ ಮೊಟಕುಗೊಳಿಸಿವೆ. ಪರಿಸ್ಥಿತಿ ನೋಡಿಕೊಂಡು ಸಂಚಾರ ಪುನರಾರಂಭ ಮಾಡಲು ನಿರ್ಧರಿಸಲಾಗಿದೆ. ಇದರಿಂದ ನೂರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.