ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಭೇಟಿ ನೀಡಿದ್ದು. ವಿಳಿಂಜಂ ಅಂತಾರಾಷ್ಟ್ರೀಯ ಬಂದರು ಉದ್ಘಾಟನೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ಕೂಡ ಭಾಗವಹಿಸಿದ್ದು. ಪ್ರಧಾನಿ ಮೋದಿ ಶಶಿ ತರೂರ್ ಕೈ ಕುಲುಕುವ ಮೂಲಕ ಮಾತನಾಡಿದರು. ಜೊತೆಗೆ ಇವತ್ತಿನ ಸಭೆ ಅನೇಕ ಜನರ ನಿದ್ರೆಗೆ ಭಂಗ ತರಲಿದೆ ಎಂದು ಮಾರ್ಮಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಶಿ ತರೂರ್ “ನಾನು ಮುಖ್ಯಮಂತ್ರಿಗಳಿಗೆ ಹೇಳಲು ಬಯಸುತ್ತೇನೆ, ನೀವು ಭಾರತ ಮೈತ್ರಿಕೂಟದ ಬಲವಾದ ಆಧಾರಸ್ತಂಭ, ಶಶಿ ತರೂರ್ ಕೂಡ ಇಲ್ಲಿ ಕುಳಿತಿದ್ದಾರೆ. ಇಂದಿನ ಕಾರ್ಯಕ್ರಮವು ಹಲವಾರು ಜನರಿಗೆ ನಿದ್ರೆಯಿಲ್ಲದ ರಾತ್ರಿಗಳನ್ನು ನೀಡಲಿದೆ” ಎಂದು ಪ್ರಧಾನಿ ಮೋದಿ ಟೀಕಿಸಿದರು. ಇದನ್ನೂ ಓದಿ :ರಾಯಚೂರು, ಚಾಮರಾಜನಗರ ಜಿಲ್ಲಾಧಿಕಾರಿ ಕಛೇರಿಗಳಿಗೆ ಬಾಂಬ್ ಬೆದರಿಕೆ..!
VIDEO | Kerala: PM Modi addresses a public gathering after inaugurating Vizhinjam International Seaport in Thiruvananthapuram.
“I want to say this to the CM (Pinarayi Vijayan)… you are a strong pillar of INDI alliance. (Congress MP) Shashi Tharoor is also sitting here. Today’s… pic.twitter.com/Z18tXGiaqQ
— Press Trust of India (@PTI_News) May 2, 2025
ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ‘ಕೇರಳ ಜನರ ಪರವಾಗಿ, ಈ ಮಹತ್ವದ ಯೋಜನೆಯನ್ನು ರಾಷ್ಟ್ರಕ್ಕೆ ಅರ್ಪಿಸಲು ನಮ್ಮ ರಾಜ್ಯಕ್ಕೆ ಭೇಟಿ ನೀಡಿದ್ದಕ್ಕಾಗಿ ಪ್ರಧಾನಿಯವರಿಗೆ ಮತ್ತೊಮ್ಮೆ ನಮ್ಮ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಈ ಕಾರ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದಕ್ಕಾಗಿ ಅದಾನಿ ಗ್ರೂಪ್ಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ’ ಎಂದು ಹೇಳಿದರು.
ಇದನ್ನೂ ಓದಿ:ಯತ್ನಾಳ್ ಸವಾಲ್ ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಶಿವಾನಂದ ಪಾಟೀಲ್
ಅಷ್ಟೇ ಅಲ್ಲದೇ ಗುರುವಾರ ರಾತ್ರಿ ಶಶಿ ತರೂರ್ ಪ್ರಧಾನಿ ಮೋದಿಯನ್ನು ಸ್ವತಃ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿಕೊಂಡಿದ್ದು. ಇದರ ಪೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬೆಳವಣಿಗೆ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.