Sunday, May 4, 2025

‘ಉಗ್ರ ದಾಳಿಗೆ ಕನ್ನಡ ಕಾರಣ’ ಎಂದಿದ್ದ ಗಾಯಕ ಸೋನು ನಿಗಮ್​ ವಿರುದ್ದ FIR ದಾಖಲು

ಬೆಂಗಳೂರು: ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಗಾಯಕ ಸೋನು ನಿಗಮ್​ ವಿರುದ್ದ ಎಫ್​ಐಆರ್​ ದಾಖಲಾಗಿದೆ. ಕರ್ನಾಟಕ ರಕ್ಷಣ ವೇದಿಕೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಏಪ್ರಿಲ್ 25-26ರಂದು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಮತ್ತು ಭಾವನಾತ್ಮಕವಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದರು. ಯುವಕನೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ್ದಕ್ಕೆ ‘ಕನ್ನಡ. ಕನ್ನಡ ಇದಕ್ಕೆ ಪಹಲ್ಗಾಮ್​ನಲ್ಲಿ ದಾಳಿ ನಡೆಯಿತು ಎಂದಿದ್ದರು. ಸೋನು ನಿಗಮ್​ ಈ ಹೇಳಿಕೆಗೆ ಕನ್ನಡಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಕರವೇ ನಾರಯಣ ಗೌಡರಂತೂ ಸೋನು ನಿಗಮ್​ರನ್ನು ಸಾಂಸ್ಕೃತಿಕ ಭಯೋತ್ಫಾದಕ ಎಂದು ಹೇಳಿದ್ದರು.

ಇದನ್ನೂ ಓದಿ:Viral Video: ಪ್ರೇಯಸಿ ಜೊತೆ ನೂಡಲ್ಸ್​ ತಿನ್ನುತ್ತಿದ್ದ ಮಗನಿಗೆ ಚಪ್ಪಲಿಯಲ್ಲಿ ಹೊಡೆದ ಪೋಷಕರು

ಇದೀಗ ಕರ್ನಾಟಕ ರಕ್ಷಣ ವೇದಿಕೆ ನೀಡಿದ ದೂರಿನ ಆಧಾರದ ಮೇಳೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋನು ನಿಗಮ್​ ವಿರುದ್ದ ಎಫ್​ಐಆರ್ ದಾಖಲಾಗಿದ್ದು. ಬಿಎನ್​ಎಸ್​ ಸೆಕ್ಷನ್​ 352ರ ಅಡಿ ಪ್ರಚೋದನೆ ನೀಡಿದ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES