ಖ್ಯಾತ ಗಾಯಕ ಸೋನು ನಿಗಮ್ ಇತ್ತೀಚೆಗೆ ಬೆಂಗಳೂರಿನ ಶೋ ಒಂದರಲ್ಲಿ ನೀಡಿದ್ದ ಹೇಳಿಕೆ ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ‘ಕನ್ನಡ.. ಕನ್ನಡ.. ಇದೇ ಕಾರಣದಿಂದ ಪಹಲ್ಗಾಮ್ನಲ್ಲಿ ದಾಳಿ ಆಯಿತು’ ಎಂಬರ್ಥ ಬರುವಂತೆ ಅವರು ಮಾತನಾಡಿದ್ದರು. ಈ ಹೇಳಿಕೆ ನೀಡಿದ್ದ ಅವರ ವಿರುದ್ದ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ಇದೀಗ ಅವರು ಈ ವಿವಾದದ ಬಗ್ಗೆ ಮೌನ ಮುರಿದಿದ್ದು. ಕಾರ್ಯಕ್ರಮ ನಡೆದ ಆ ದಿನಾ ಏನಾಯಿತು ಎಂಬುದನ್ನು ವಿವರಿಸಿದ್ದಾರೆ.
ಈ ಕುರಿತು ಸೋನು ನಿಗಮ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು. ‘ಕನ್ನಡ.. ಕನ್ನಡ’ ಎಂದು ಪ್ರೀತಿಯಿಂದ ಕರೆಯುವುದಕ್ಕೂ ‘ಕನ್ನಡ.. ಕನ್ನಡ’ ಎಂದು ಧಮ್ಕಿ ಹಾಕುವುದಕ್ಕೂ ವ್ಯತ್ಯಾಸ ಇದೆ. ಕಾರ್ಯಕ್ರಮ ನಡೆದ ಆ ದಿನ ವೇದಿಕೆ ಕೆಳಗೆ ನಾಲ್ಕೈದು ಜನರು ಗುಂಡಾಗಳು ಇದ್ದರು, ಅವರು ಕೂಗಾಡುತ್ತಿದ್ದರು. ಅವರು ತುಂಬಾನೇ ತೊಂದರೆ ಮಾಡುತ್ತಿದ್ದರು. ಪಹಲ್ಗಾಮ್ನಲ್ಲಿ ಪ್ಯಾಂಟ್ ಕಳಚುವಾಗ ಭಾಷೆ ಕೇಳಿಲ್ಲ ಎಂಬುದನ್ನು ಅವರಿಗೆ ಹೇಳೋದು ಅನಿವಾರ್ಯವಾಗಿತ್ತು’ ಅದಕ್ಕೆ ಈ ರೀತಿ ಹೇಳಬೇಕಾಯ್ತು ಎಂಬರ್ಥದಲ್ಲಿ ಸೋನು ನಿಗಮ್ ಹೇಳಿದ್ದಾರೆ. ಇದನ್ನೂ ಓದಿ :‘ನನಗೆ ಸಿಗದ ನೀನು ಇನ್ಯಾರಿಗೂ ಸಿಗಬಾರದು’; ಮಾಜಿ ಪ್ರೇಯಸಿಯ ಮೇಲೆ ಆ್ಯಸಿಡ್ ಎರಚಿದ ದುಷ್ಕರ್ಮಿ
View this post on Instagram
ಮುಂದುವರಿದು ಮಾತನಾಡಿದ ಸೋನು ನಿಗಮ್ ‘ಯಾವುದೇ ರಾಜ್ಯಕ್ಕೆ ಹೋದರು ಈ ರೀತಿ ಕೆಟ್ಟವರು ನಾಲ್ಕೈದು ಜನರು ಇರುತ್ತಾರೆ. ಜಗತ್ತು ಪ್ರೀತಿಯಿಂದ ನಿಮ್ಮ ಜೊತೆ ನಡೆದುಕೊಳ್ಳುವಾಗ ನೀವು ಹಾಡಬೇಕು ಎಂದು ಯಾರೊಬ್ಬರೂ ಬೆದರಿಕೆ ಹಾಕಬಾರದು. ನಾನು ಯಾವಾಗಲೂ ಕನ್ನಡ ಹಾಡನ್ನು ಹಾಡಲು ರೆಡಿ ಆಗಿ ಬಂದಿರುತ್ತೇವೆ. ಇದನ್ನು ಅನೇಕ ಬಾರಿ ಹೇಳಿದ್ದೇನೆ. ಆದರೆ, ಈ ರೀತಿ ಕೆಟ್ಟದನ್ನು ಮಾಡುವವರು ಯಾರೇ ಆದರೂ ಅಲ್ಲಿಯೇ ತಡೆಯಬೇಕು’ ಎಂದು ಹೇಳಿದ್ದಾರೆ ಸೋನು ನಿಗಮ್.
ಇದನ್ನೂ ಓದಿ :ಚೆನೈ ಮೂಲಕ ಶ್ರೀಲಂಕಾಗೆ ಪರಾರಿಯಾದ್ರ ಪಹಲ್ಗಾಮ್ ಉಗ್ರರು? ಕೊಲಂಬೋ ವಿಮಾನ ನಿಲ್ದಾಣದಲ್ಲಿ ಶೋಧ
‘ನಾನು ಮೊದಲ ಹಾಡು ಹೇಳುವಾಗ ಆ ನಾಲ್ಕು ಜನ ನನ್ನನ್ನೇ ಗುರಾಯಿಸುತ್ತಾ, ಹಾಡು ಹೇಳು ಎಂದು ಬೆದರಿಕೆ ಹಾಕುತ್ತಿದ್ದರು. ಎಲ್ಲಾ ಕನ್ನಡಿಗರೂ ಹೀಗೆ ಎಂದುಕೊಳ್ಳಬೇಡಿ. ಕನ್ನಡಿಗರು ಸಾಕಷ್ಟು ಒಳ್ಳೆಯವರು’ ಎಂದು ಸೋನು ನಿಗಮ್ ಅವರು ಅಂದಿನ ಘಟನೆ ವಿವರಿಸಿದ್ದಾರೆ.