Thursday, May 8, 2025

‘ಆಪರೇಷನ್​ ಸಿಂಧೂರ’: ಮೋಸ್ಟ್​ ವಾಟೆಂಡ್​ ಉಗ್ರ ಮಸೂದ್ ಅಜರ್ ಕುಟುಂಬದ 14 ಮಂದಿ ಸಾವು..!

ಇಸ್ಲಾಮಬಾದ್​ : ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ಆಪರೇಷನ್​ ಸಿಂಧೂರ್​ ಹೆಸರಿನಲ್ಲಿ ಕಾರ್ಯಚರಣೆ ನಡೆಸಿದ್ದು. ಸುಮಾರು 25 ನಿಮಿಷಗಳ ಕಾಲ ನಡೆದ ಕಾರ್ಯಚರಣೆಯಲ್ಲಿ ಪಾಕಿಸ್ತಾನದ 9 ಉಗ್ರರ ಅಡಗು ತಾಣಗಳನ್ನು ನಾಶಪಡಿಸಲಾಗಿದೆ. ಈ ಕಾರ್ಯಚರಣೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದು. ಇದರಲ್ಲಿ ಕುಖ್ಯಾತ ಉಗ್ರ ಮಸೂದ್ ಅಜರ್ ಕುಟುಂಬದ 14 ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಪಹಲ್ಗಾಮ್​ ದಾಳಿ ನಡೆದು ಸರಿಯಾಗಿ 15 ದಿನಗಳ ನಂತರ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಆಪರೇಷನ್​ ಸಿಂಧೂರ ಹೆಸರಿನಲ್ಲಿ ಕಾರ್ಯಚರಣೆ ನಡೆಸಿದ್ದು. 100ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಿದೆ. ಈ ಕಾರ್ಯಚರಣೆಯಲ್ಲಿ ​ಜೈಶ್ ಇ- ಮೊಹಮ್ಮದ್ ಉಗ್ರ  ಸಂಘಟನೆಯ ಸಂಸ್ಥಾಪಕ, ವಿಶ್ವದ ಕುಖ್ಯಾತ ಉಗ್ರ ಮಸೂದ್ ಅಜರ್​ ಕುಟುಂಬದ 14 ಸದಸ್ಯರು ಸಾವನ್ನಪ್ಪಿದ್ದಾರೆ. ಈ 14 ಮಂದಿಯಲ್ಲಿ ಮಸೂದ್ ಅಜರ್ ಮಗ ರೌಪ್​ ಅಸ್ಗರ್​ ಕೂಡ ಸಾವನ್ನಪ್ಪಿದ್ದಾನೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ :‘ನಮ್ಮ ಸಹೋದರರ ಹತ್ಯೆಗೆ ಆಪರೇಷನ್​ ಸಿಂಧೂರದ ಮೂಲಕ ಉತ್ತರ’: ಸೇನೆಗೆ ಅಮಿತ್​ ಶಾ ಶ್ಲಾಘನೆ

ಭಯೋತ್ಪಾದಕ ಮಸೂದ್ ಪಾಕಿಸ್ತಾನದಲ್ಲಿ ಕುಳಿತುಕೊಂಡು ಭಾರತದ ವಿರುದ್ಧ ನಿರಂತರವಾಗಿ ಭಯೋತ್ಪಾದಕ ಪಿತೂರಿಗಳನ್ನು ರೂಪಿಸುತ್ತಿದ್ದಾನೆ. ಆದರೆ ಈಗ ಭಾರತವು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿದೆ ಮತ್ತು ಈ ವಿಶೇಷ ಕಾರ್ಯಾಚರಣೆಯಲ್ಲಿ, ಭಾರತೀಯ ಸೇನೆಯು ಪಾಕಿಸ್ತಾನದ 9 ಸ್ಥಳಗಳ ಮೇಲೆ ವಾಯುದಾಳಿ ನಡೆಸಿದೆ. ಇದು ಮಸೂದ್ ಕುಟುಂಬದ ಅಂತ್ಯ. ಯಾರೆಲ್ಲಾ ಕೊಲ್ಲಲ್ಪಟ್ಟರು ಎಂಬುದರ ಕುರಿತು ಶೀಘ್ರದಲ್ಲೇ ಪೂರ್ಣ ಮಾಹಿತಿ ಬಹಿರಂಗಗೊಳ್ಳಲಿದೆ.

RELATED ARTICLES

Related Articles

TRENDING ARTICLES