Wednesday, May 21, 2025

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್: ತಪ್ಪಿತು ಭಾರಿ ಅನಾಹುತ..!

ಬೀದರ್ : ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್​ ಕಂದಕಕ್ಕೆ ಉರುಳಿ ಉರುಳಿದ್ದು. ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಾಯವಾಗಿದೆ. ಅದೃಷ್ಟವಶಾತ್​ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

ಬೀದರ್ ಜಿಲ್ಲೆಯ, ಔರಾದ್ ತಾಲೂಕಿನ, ಜಮಲಾಪುರ ಕ್ರಾಸ್ ಬಳಿ ಘಟನೆ ಸಂಭವಿಸಿದ್ದು. ಔರಾದ್‌ನಿಂದ ಕಮಲನಗರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್​ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಬೆಳಿಗ್ಗೆ ಸುಮಾರು 8 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ :ಗೃಹ ಸಚಿವ ಪರಮೇಶ್ವರ್ ಅವರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ..!

ಎದುರಿಗೆ ಬರುತ್ತಿದ್ದ ಟೆಂಪೋ ಜೊತೆ ಸಂಭವಿಸುವ ಅಪಘಾತವನ್ನು ತಪ್ಪಿಸಲು ಮುಂದಾದಾಗ ಅಪಘಾತ ಸಂಭವಿದೆ. ಬಸ್ ಪ್ರಯಾಣ ಮಾಡುತ್ತಿದ್ದ ಒಟ್ಟು 9 ಪ್ರಯಾಣಿಕರ ಪೈಕಿ ಇಬ್ಬರಿಗೆ ಗಾಯವಾಗಿದ್ದು. ಗಾಯಾಳುಗಳನ್ನು ಔರಾದ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದೊಡ್ಡ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

RELATED ARTICLES

Related Articles

TRENDING ARTICLES