Thursday, May 29, 2025

ಸಂಭಾವನೆ ಇಲ್ಲದೆ ಅರಣ್ಯ ಇಲಾಖೆ ರಾಯಭಾರಿಯಾದ ಅನಿಲ್​ ಕುಂಬ್ಳೆ; ಕನ್ನಡಿಗರಿಂದ ಮೆಚ್ಚುಗೆ

ಬೆಂಗಳೂರು : ಭಾರತೀಯ ಕ್ರಿಕೆಟ್​ ತಂಡದ ಮಾಜಿ ಆಟಗಾರ ಅನಿಲ್​ ಕುಂಬ್ಳೆ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನೇಮಕಗೊಂಡಿದ್ದು. ಇದಕ್ಕೆ ಅವರು ಯಾವುದೇ ಸಂಭಾವನೆ ಪಡೆಯುತ್ತಿಲ್ಲ. ಅನಿಲ್​ ಕುಂಬ್ಳೆ ಅವರ ಈ ನಡೆ ಕನ್ನಡಿಗರಿಂದ ಮೆಚ್ಚುಗೆಗೆ ಕಾರಣವಾಗಿದೆ.

ಮೈಸೂರು ಸ್ಯಾಂಡಲ್ ಸೋಪ್ ಪ್ರಚಾರ ರಾಯಭಾರಿಯಾಗಿ ಕರ್ನಾಟಕ ಸರ್ಕಾರ ಇತ್ತೀಚೆಗೆ ಬಾಲಿವುಡ್​ ನಟಿ ತಮನ್ನಾ ಭಾಟಿಯಾರನ್ನು ನೇಮಕ ಮಾಡಿಕೊಂಡಿತ್ತು. ಸುಮಾರು 6.2 ಕೋಟಿ ರೂಪಾಯಿ ಹಣ ನೀಡುವ ಮೂಲಕ ತಮನ್ನಾ ಭಾಟಿಯಾರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಇದರ ನಡುವೆ ರಾಜ್ಯ ಅರಣ್ಯ ಇಲಾಖೆ ಅನಿಲ್​ ಕುಂಬ್ಳೆ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿಕೊಂಡಿದೆ. ಇದನ್ನೂ ಓದಿ :ಮಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು; ಓರ್ವ ಸಾ*ವು, ಮತ್ತೊಬ್ಬನ ಸ್ಥಿತಿ ಗಂಭೀರ

ರಾಜ್ಯದ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನೇಮಕಗೊಂಡಿರುವ ಅನಿಲ್​ ಕುಂಬ್ಳೆ ಅವರು ಇದಕ್ಕೆ ಯಾವುದೇ ಸಂಭಾವನೆ ಪಡೆಯುತ್ತಿಲ್ಲ ಎಂದು ತಿಳಿದು ಬಂದಿದ್ದು. ಅರಣ್ಯ ಮತ್ತು ಪರಿಸರ ಸಂರಕ್ಷಣೆಯ ಹಿತಾಸಕ್ತಿಯಿಂದ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅನಿಲ್ ಕುಂಬ್ಳೆ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ :ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಕನ್ನಡದ ಖ್ಯಾತ ನಟ ಅನಂತ್​ ನಾಗ್​

ಅನಿಲ್​ ಕುಂಬ್ಳೆ ಅವರು ಇತ್ತೀಚೆಗೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದು. ಕ್ರಿಕೆಟ್ ಹೊರತಾಗಿ ವನ್ಯಜೀವಿ ಛಾಯಾಗ್ರಹಣದಲ್ಲಿಯೂ ಅನಿಲ್​ ಕುಂಬ್ಳೆ ಅವರು ಆಸಕ್ತಿ ಹೊಂದಿದ್ದಾರೆ. ಒಂದೆಡೆ ತಮನ್ನಾ ವಿಚಾರ ವ್ಯಾಪಕ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ, ಅನಿಲ್​ ಕುಂಬ್ಳೆ ಅವರು ಸಂಭಾವನೆಯನ್ನ ಪಡೆಯದೆ ಅರಣ್ಯ ಇಲಾಖೆ ಮತ್ತು ವನ್ಯಜೀವಿ ಸಂರಕ್ಷಣ ರಾಯಭಾರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಮೆಚ್ಚುಗೆಗೆ ಕಾರಣವಾಗಿದೆ.

RELATED ARTICLES

Related Articles

TRENDING ARTICLES