Thursday, May 29, 2025

ದುಬೈಗೆ ತೆರಳಲು ಅವಕಾಶ ಕೊಡಿ ಎಂದು ನ್ಯಾಯಾಲಯಕ್ಕೆ ದರ್ಶನ್​​ ಮನವಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟ ದರ್ಶನ್​ ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್‌ಗೆ ತೆರಳಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಜಾಮೀನು ಪಡೆದು ಜೈಲಿನಿಂದ ಹೊರಬಂದ ನಂತರ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವ ನಟ ದರ್ಶನ್​, ರಾಜಸ್ಥಾನ ಸೇರಿದಂತೆ ಹಲವಡೆ ಚಿತ್ರೀಕರಣ ನಡೆಸಿದ್ದಾರೆ. ಇದೀಗ ದುಬೈ ಮತ್ತು ಯೂರೋಪ್​ನಲ್ಲಿ ಸಿನಿಮಾ ಶೂಟಿಂಗ್​ಗೆ ತೆರಳಲು ಅನುಮತಿ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ಇದನ್ನೂ ಓದಿ :ಅಬ್ದುಲ್ ರಹೀಂ ಹತ್ಯೆ ಪ್ರಕರಣ; ಕರಾವಳಿ ಮತ್ತೆ ಉದ್ವಿಘ್ನ, ಬಸ್​ಗಳ ಮೇಲೆ ಕಲ್ಲು ತೂರಾಟ

ಇನ್ನು ದರ್ಶನ್ ವಿದೇಶಕ್ಕೆ ತೆರಳಲು ಎಸ್​ಪಿಪಿ ಆಕ್ಷೇಪ ವ್ಯಕ್ತಪಡಿಸಿದ್ದು. ಸುಪ್ರೀಂ ಕೋರ್ಟ್​ನಲ್ಲಿ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ. ಇದರ ವಿಚಾರಣೆ ಇನ್ನು ಬಾಕಿ ಇದೆ. ಇದರ ನಡುವೆ ದರ್ಶನ್​ ವಿದೇಶಕ್ಕೆ ತೆರಳಲು ಅವಕಾಶ ನೀಡಬಾರದು. ಇದು ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ವಿಶೇಷ ಸಾರ್ವಜನಿಕ ಅಭಿಯೋಜಕ (ಎಸ್‌ಪಿಪಿ) ಆಕ್ಷೇಪಣೆ ಸಲ್ಲಿಸಿದ್ದಾರೆ.

RELATED ARTICLES

Related Articles

TRENDING ARTICLES