ತುಮಕೂರು: ಕೆಎಸ್ಆರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮತ್ತಿಹಳ್ಳಿ ಗೇಟ್ ಅಪಘಾತ ಸಂಭವಿಸಿದ್ದು. ತಿಪಟೂರುನಿಂದ ಕುಂದಾಪುರ ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು. ಮೃತರನ್ನು ಅಯ್ಯನ ಭಾವಿ ಗ್ರಾಮದ ಉಮೇಶ್ ಮತ್ತು ರಜಿನಿಕಾಂತ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ :ಸಂಸತ್ನಲ್ಲಿ ಮುಸ್ಲಿಂ ಸಂಸದೆಗೆ ಕಿರುಕುಳ; ಮಧ್ಯ ಸೇವಿಸಿ, ಟೇಬಲ್ ಮೇಲೆ ಡ್ಯಾನ್ಸ್ ಮಾಡುವಂತೆ ಒತ್ತಡ
ಘಟನೆ ಸಂಬಂಧ ಹೊನ್ನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಶವಗಾರಕ್ಕೆ ರವಾನೆ ಮಾಡಲಾಗಿದೆ.