ಮೈಸೂರು : ಮಾಜಿ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ್ದು. ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬಿಎಸ್ವೈ ದೇವರ ಸನ್ನಿಧಿಯಲ್ಲಿ ರಾಜಕೀಯ ಮಾತನಾಡಲ್ಲ, ನಾಡಿನ ಜನರಿಗೆ ಒಳಿತಾಗಲಿ ಎಂದು ಹೇಳಿದರು.
ಮಾಜಿ ಸಿಎಂ ಯಡಿಯೂರಪ್ಪನವರು ನಾಡ ಅಧಿದೇವತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ್ದು, ತಾಯಿ ಚಾಮುಂಡಿ ದರ್ಶನ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಬಿಎಸ್ವೈ ‘ಬೆಳಿಗ್ಗೆ ಇದ್ದುಕ್ಕಿಂದಂಗೆ ತಾಯಿ ದರ್ಶನ ಮಾಡಬೇಕು ಅನ್ನಿಸ್ತು, ಅದಕ್ಕಾಗಿ ಚಾಮುಂಡಿ ತಾಯಿಯ ದರ್ಶನ ಪಡೆಯಲು ಬಂದಿದ್ದೇನೆ, ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ :ಪೋರ್ಸ್ ಮಾಡಿ ಫೈನ್ ಹಾಕ್ಬೇಡಿ; ಮಂಡ್ಯ ಪೊಲೀಸರಿಗೆ ಉಪಲೋಕಾಯುಕ್ತ ಬಿ. ವೀರಪ್ಪರಿಂದ ಎಚ್ಚರಿಕೆ
ದೇವರ ಸನ್ನಿಧಿಯಲ್ಲಿ ರಾಜಕೀಯದ ಬಗ್ಗೆ ಮಾತನಾಡಲ್ಲ ಎಂದು ಹೇಳಿದ ಬಿಎಸ್ವೈ ‘ಮೊಮ್ಮಗನ ಮದುವೆ ಇದೇ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದರು. ಕಮಲ್ ಹಾಸನ್ ವಿಚಾರದ ಕುರಿತು ಮಾತನಾಡಿದ ಮಾಜಿ ಸಿಎಂ ‘ಕಮಲ್ ಹಾಸನ್ ನೀಡಿರುವ ಹೇಳಿಕೆ ಸರಿಯಿಲ್ಲ, ಈಗಾಗಲೇ ಅವರ ಹೇಳಿಕೆಯನ್ನ ನಾನು ಖಂಡಿಸಿದ್ದೇನೆ, ಈ ರೀತಿ ಮಾತನಾಡಬಾರದು ಎಂದು ಹೇಳಿದರು. ಇದನ್ನೂ ಓದಿ:‘ಯಾರ್ ಮನೆ ಹಾಳು ಮಾಡಲು ಈ ರೀತಿ ತೆರಿಗೆ ಹಾಕ್ತಿದ್ದೀರಾ’; ಸರ್ಕಾರದ ವಿರುದ್ದ ಆರ್.ಅಶೋಕ್ ಆಕ್ರೋಶ