ರೆಬೆಲ್ ಸ್ಟಾರ್ ಅಂಬರೀಶ್ ಅವರು ಹುಟ್ಟಿದ ಹಬ್ಬ ಹಿನ್ನಲೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಸ್ಮರಿಸಿಕೊಳ್ಳುತ್ತಿದ್ದು. ಈ ವೇಳೆ ನಟ ದರ್ಶನ್ ಕೂಡಾ ಅಂಬಿ ಅಪ್ಪಾಜಿಗೆ ವಿಶ್ ಮಾಡಿದ್ದಾರೆ. ‘ತಂದೆ ಸಮಾನರಾದ ಅಂಬಿ ಅಪ್ಪಾಜಿ ಎಂದಿಗೂ ನಮ್ಮ ಮನಸ್ಸಿನಲ್ಲಿದ್ದಾರೆ ಎಂದು ಟ್ವಿಟ್ ಮಾಡಿದ್ದಾರೆ.
ನಟ ದರ್ಶನ್, ಅಂಬರೀಶ್ ಕುಟುಂಬದೊಂದಿಗೆ ಸಾಕಷ್ಟು ಆತ್ಮೀಯತೆಯನ್ನ ಕಾಯ್ದುಕೊಂಡಿದ್ದರು. ಅಂಬರೀಶ್ ಕೂಡ ದರ್ಶನ್ರನ್ನು ಸ್ವಂತ ಮಗನಂತೆ ಕಾಣುತ್ತಿದ್ದರು. ಅಂಬರೀಶ್ ಮರಣದ ನಂತರವೂ ದರ್ಶನ್ ಅವರ ಕುಟುಂಬದೊಂದಿಗೆ ಆತ್ಮೀಯವಾಗಿಯೇ ಇದ್ದರು. ಆದರೆ ನಟ ದರ್ಶನ್ ಜೈಲಿಗೆ ಹೋಗಿ ಬಂದ ನಂತರ ಸುಮಲತಾ ಮತ್ತು ಅಂಬರೀಶ್ ಅವರ ನಡುವೆ ಭಿನ್ನಭಿಪ್ರಾಯ ಮೂಡಿದೆ. ಇದನ್ನೂ ಓದಿ :ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಲಿಗಳ ಕಾಟ; ಬಾಳೆಹಣ್ಣು ತಿನ್ನುವ ವಿಡಿಯೋ ವೈರಲ್
ಇದರ ನಡುವೆ ನಟ ದರ್ಶನ್ ಅಂಬರೀಶ್ ಅವರ ಹುಟ್ಟುಹಬ್ಬಕ್ಕೆ ಟ್ವೀಟ್ ಮಾಡಿರುವ ನಟ ದರ್ಶನ್, ‘ತಂದೆ ಸಮಾನರಾದ ಅಂಬಿ ಅಪ್ಪಾಜಿ ರವರು ಇಂದಿಗೂ ನಮ್ಮ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ. ಅವರ ಜೀವನ ಶೈಲಿ, ಕಲಿಸಿದ್ದ ಪಾಠಗಳು ಮತ್ತು ತೋರುತ್ತಿದ್ದ ಪ್ರೀತಿ ನನಗೆ ಸದಾ ದಾರಿದೀಪವಾಗಿದೆ. ಈ ಹುಟ್ಟುಹಬ್ಬದ ದಿನದಂದು ನೀವು ದೈಹಿಕವಾಗಿ ಇಲ್ಲದಿದ್ದರೂ, ನಿಮ್ಮ ಕಲಾಸೇವೆ ಹಾಗೂ ಜನಹಿತ ಕಾರ್ಯಗಳಿಗೆ ಕನ್ನಡಿಗರು ಸದಾ ಚಿರಋಣಿ. ವೀ ಲವ್ ಯು ರೆಬೆಲ್ ಸ್ಟಾರ್’ ಎಂದಿದ್ದಾರೆ ನಟ ದರ್ಶನ್.
ಇದನ್ನೂ ಓದಿ :ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 36 ಹಸುಗಳ ರಕ್ಷಣೆ
ತಂದೆ ಸಮಾನರಾದ ಅಂಬಿ ಅಪ್ಪಾಜಿ ರವರು ಇಂದಿಗೂ ನಮ್ಮ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ. ಅವರ ಜೀವನ ಶೈಲಿ, ಕಲಿಸಿದ್ದ ಪಾಠಗಳು ಮತ್ತು ತೋರುತ್ತಿದ್ದ ಪ್ರೀತಿ ನನಗೆ ಸದಾ ದಾರಿದೀಪವಾಗಿದೆ ಎಂದು ಟ್ವಿಟ್ ಮಾಡಿದ್ದಾರೆ.