ಬೆಂಗಳೂರು : ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಿದ್ದು. ಇಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ನಿವಾಸಕ್ಕೆ ಭೇಟ ನೀಡಿದ ಅನಿಲ್ ಕುಂಬ್ಳೆ ಸಚಿವರಿಂದ ಅಪಾಯಿಂಟ್ಮೆಂಟ್ ಲೆಟರ್ ಪಡೆದಿದ್ದಾರೆ.
ಇಂದು ಬೆಳಿಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ನಿವಾಸಕ್ಕೆ ಭೇಟಿ ನೀಡಿ ಮಾಧ್ಯಮದೊಂದಿಗೆ ಮಾತನಾಡಿದ ಅನಿಲ್ ಕುಂಬ್ಳೆ “ಸರ್ಕಾರ ನನಗೆ ಒಂದು ಅವಕಾಶ ಕೊಟ್ಟಿದೆ. ರಘುನಂದನ್ ಜವಾಬ್ದಾರಿ ಕೊಟ್ಟಿದ್ದಾರೆ, ಇದಕ್ಕೂ ಮುಂಚೆಯೂ ವನ್ಯಜೀವಿ ಮಂಡಳಿ ಉಪಾಧ್ಯಕ್ಷನಾಗಿದ್ದೆ. ಸಿಎಂ, ಡಿಸಿಎಂ, ಖಂಡ್ರೆ ಅವಕಾಶ ಕೊಟ್ಟಿದ್ದಾರೆ ಅದಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ. ಇದನ್ನೂ ಓದಿ :ಡಾಕ್ಟರೇಟ್ ಪದವಿ ತಿರಸ್ಕರಿಸಿದ ಸಚಿವ ಸತೀಶ್ ಜಾರಕಿಹೊಳಿ
ವನ್ಯಜೀವಿಗಳ ಮೇಲೆ ನನಗೆ ಕಾಳಜಿ ಇದೆ. ವನ್ಯಜೀವಿಗಳಿಗಾಗಿ ನನ್ನ ಕೈಲಾದಷ್ಟು ಸೇವೆ ಸಲ್ಲಿಸುತ್ತೇನೆ. ಇಂತಹ ಅವಕಾಶ ಕೊಟ್ಟಿದ್ದಕ್ಕೆ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಅನಿಲ್ ಕುಂಬ್ಳೆ ಹೇಳಿದರು.
ಆರ್ಸಿಬಿ ಕಪ್ ಗೆಲ್ಲುತ್ತೆ ಅಂತ ಈಗಲೇ ಹೇಳಬೇಡಿ..!
ಗುಜರಾತ್ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ಆರ್ಸಿಬಿ ಮತ್ತು ಪಂಜಾಬ್ ತಂಡಗಳು ಸೆಣಸಾಡುತ್ತಿದ್ದು. ಈ ಕುರಿತು ಮಾತನಾಡಿದ ಅನಿಲ್ ಕುಂಬ್ಳೆ ” ಆರ್ಸಿಬಿ ಗೆಲ್ಲುತ್ತೆ ಎಂದು ಈಗಲೇ ಹೇಳಬೇಡಿ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ :‘ಕ್ಷಮೆ ಕೇಳದಿದ್ದರೆ, ಸಿನಿಮಾ ಯಾಕ್ ರಿಲೀಸ್ ಮಾಡ್ತೀರಾ’; ಕಮಲ್ಗೆ ಹಾಸನ್ಗೆ ಹೈಕೋರ್ಟ್ ತರಾಟೆ
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್ಸಿಬಿ ಗೆಲ್ಲಬೇಕು ಎಂಬುದು ನಮ್ಮ ಹೃದಯದ ಮಾತು. ಹಾಗೆಯೇ ಆಗಲಿ ಎಂದು ಹಾರೈಸೋಣ ಎಂದರು. ಪಂಜಾಬ್ ತಂಡದಲ್ಲೂ ನಾನು ಆಡಿದ್ದೆ. ಆರ್ಸಿಬಿಯಲ್ಲೂ ಆಡಿದ್ದೆ. ಎರಡೂ ತಂಡಗಳು ಬೆಸ್ಟ್. ಉತ್ತಮ ಪ್ರದರ್ಶನ ನೀಡಿದ ತಂಡಗಳೇ ಫೈನಲ್ ಪ್ರವೇಶಿಸಿವೆ. ಆರ್ಸಿಬಿ ಗೆಲ್ಲಲಿ ಎಂಬುದು ಹಾರೈಕೆ ಎಂದು ಹೇಳಿದರು.