ನಿಷ್ಠೆ ಪ್ರಶಸ್ತಿ ಗೆಲ್ಲುವುದಷ್ಟೇ ಅಲ್ಲ, ಅದು ಇತಿಹಾಸ ನಿರ್ಮಿಸುತ್ತದೆ; ಆನಂದ್ ಮಹಿಂದ್ರಾ

ಕಳೆದ 17 ವರ್ಷಗಳಿಂದ ಐಪಿಎಲ್‌ ಪ್ರಶಸ್ತಿ ಬರ ಎದುರಿಸಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್‌ 18ನೇ ಆವೃತ್ತಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಆರ್​ಸಿಬಿ ಗೆಲುವಿಗೆ ದೇಶದೆಲ್ಲಡೆಯಿಂದ ಶುಭಾಷಯಗಳ ಮಹಾಪೂರವೇ ಹರಿದು ಬರುತ್ತಿದ್ದು. ಮಹಿಂದ್ರಾ ಗ್ರೂಪ್​ನ ಅಧ್ಯಕ್ಷ ಆನಂದ್​ ಮಹಿಂದ್ರ ಅವರು ಟ್ವಿಟ್​ ಮಾಡಿ ಶುಭಾಷಯ ತಿಳಿಸಿದ್ದಾರೆ. ಇದನ್ನೂ ಓದಿ :ಜುಲೈ 21ರಿಂದ ಸಂಸತ್ ಮುಂಗಾರು ಅಧಿವೇಶನ; ಆಪರೇಷನ್​ ಸಿಂಧೂರ್​ ಬಗ್ಗೆ ಚರ್ಚೆ

ಸ್ಟಾರ್ ಬ್ಯಾಟರ್‌ ವಿರಾಟ್ ಕೊಹ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದಾರೆ. ಆರ್​ಸಿಬಿ ಗೆಲುವಿಗೆ ಎಲ್ಲಡೆ ಸಂಭ್ರಮಚರಣೆ ವ್ಯಕ್ತವಾಗುತ್ತಿದ್ದು. ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಶುಭಾಶಯ ತಿಳಿಸಿದ್ದಾರೆ. ‘ಇಂತಹ ನಿಷ್ಠೆ ಕೇವಲ ಪ್ರಶಸ್ತಿಗಳನ್ನು ಗೆಲ್ಲುವುದಿಲ್ಲ, ಇದು ಇತಿಹಾಸವನ್ನು ಸೃಷ್ಟಿಸುತ್ತದೆʼ ಎಂದು ವಿರಾಟ್‌ ಕೊಹ್ಲಿಯನ್ನು ಉದ್ಧೇಶಿಸಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ:ಬೆಂಗಳೂರಿಗೆ ಬಂದಿಳಿದ ‘ರೆಡ್​ ಆರ್ಮಿ’; ಕನ್ನಡ ಧ್ವಜ ಕೊಟ್ಟು ಸ್ವಾಗತಿಸಿದ ಡಿಕೆಶಿ

RELATED ARTICLES

Related Articles

TRENDING ARTICLES