ಬೆಂಗಳೂರು : ಆರ್ಸಿಬಿ 17 ವರ್ಷಗಳ ಬಳಿಕ ಪ್ರಶಸ್ತಿಯನ್ನ ಮುಡಿಗೇಡಿಸಿಕೊಂಡಿದ್ದು. ಇಂದು ಬೆಂಗಳೂರಿನಲ್ಲಿ ಸಂಭ್ರಮಚರಣೆಯನ್ನ ಕೈಗೊಳ್ಳಲಾಗಿದೆ. ಈ ಹಿನ್ನಲೆ ಆರ್ಸಿಬಿ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜಮಾಯಿಸಿದ್ದು. ಈ ವೇಳೆ ನೂಕು ನುಗ್ಗಲು ಹೆಚ್ಚಾಗಿ ಇಬ್ಬರು ಸಾವನ್ನಪ್ಪಿದ್ದು. 20ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.
ಆರ್ಸಿಬಿ ಸಂಭ್ರಮಚರಣೆಯಲ್ಲಿ ಭಾಗಿಯಾಗಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ವಿಧಾನ ಸೌದ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜಮಾಯಿಸಿದ್ದು. ಕ್ರೀಡಾಂಗಣದ ವೇಳೆ ಪ್ರವೇಶಿಸುವ ವೇಳೆ ನೂಕು ನುಗ್ಗಲು ಸಂಭವಿಸಿದೆ. ಈ ವೇಳೆ ಸುಮಾರು 20ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರೆ. ಇಬ್ಬರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ :ನಿಷ್ಠೆ ಪ್ರಶಸ್ತಿ ಗೆಲ್ಲುವುದಷ್ಟೇ ಅಲ್ಲ, ಅದು ಇತಿಹಾಸ ನಿರ್ಮಿಸುತ್ತದೆ; ಆನಂದ್ ಮಹಿಂದ್ರಾ
ಅಸ್ವಸ್ಥರಾಗಿದ್ದವರನ್ನು ಪೊಲೀಸರು ಆಸ್ಪತ್ರೆಗೆ ರವಾನಿಸಿದ್ದು. ಹತ್ತಿರದ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ರೀಡಾಂಗಣದ ಬಳಿ ಕ್ಷಣದಿಂದ ಕ್ಷಣಕ್ಕೆ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.