ಮಂಗಳೂರು: ನಾಪತ್ತೆಯಾಗಿದ್ದ ಬಿಜೆಪಿ ಮುಖಂಡನೊಬ್ಬ ನೀರಿನ ಟ್ಯಾಂಕ್ನಲ್ಲಿ ಶವವಾಗಿ ಪತ್ತೆಯಾಗಿದ್ದು. ಮೃತ ವ್ಯಕ್ತಿಯನ್ನು ಬಿಜೆಪಿ ಮುಖಂಡ ರಮೇಶ್ ರೈ ಎಂದು ಗುರುತಿಸಲಾಗಿದೆ. ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು. ಇನ್ನಷ್ಟೆ ಸಾವಿನ ಬಗ್ಗೆ ನಿಖರ ಮಾಹಿತಿ ದೊರಕಬೇಕಿದೆ.
ಬಿಜೆಪಿ ಮುಖಂಡ ರಮೇಶ್ ರೈ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರಸಭೆ ಬಿಜೆಪಿ ಸದಸ್ಯರಾಗಿದ್ದ ರಮೇಶ್ ರೈ ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ಪಾಣಿ- ಮಂಗಳೂರು ಸೇತುವೆಯ ಬಳಿ ರಮೇಶ್ ರೈ ಮೊಬೈಲ್ ಮತ್ತು ಬೈಕ್ ಪತ್ತೆಯಾಗಿತ್ತು. ಇದನ್ನೂ ಓದಿ;ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ಸಿಬಿ ವಿರುದ್ದ FIR ದಾಖಲು
ನಂತರ ಪೊಲೀಸರು ಬೈಕ್ ಮತ್ತು ಮೊಬೈಲ್ ಪತ್ತೆಯಾದ ಸ್ಥಳದ ಸುತ್ತಮುತ್ತ ಪರಿಶೀಲನೆ ನಡೆಸಿದಾಗ ರಮೇಶ್ ಮೃತದೇಹ ಪತ್ತೆಯಾಗಿದ್ದು. ಇದೀಗ ಈ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಘಟನೆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ದೊರಕಬೇಕಿದೆ. ಇದನ್ನೂ ಓದಿ :ನಿನ್ನೆ ಒಂದೇ ದಿನ 250 ಮೊಬೈಲ್ ಕಳ್ಳತನ; ಕಾಲ್ತುಳಿತದ ವೇಳೆ ಕೈಚಳಕ ತೋರಿಸಿದ ಕಳ್ಳರು