Friday, June 6, 2025

ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ RCB

ಬೆಂಗಳೂರು: ಆರ್​ಸಿಬಿ ಸಂಭ್ರಮಚರಣೆಗೆ ಎಂದು ನಿನ್ನೆ ಲಕ್ಷಾಂತರ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆಗಮಿಸಿದ್ದರು. ಈ ವೇಳೆ ನೂಕು ನುಗ್ಗಲು ಉಂಟಾಗಿ, ಕಾಲ್ತುಳಿತದಲ್ಲಿ 11 ಮಂದಿ ಅಸುನೀಗಿದ್ದರು. ಇದೀಗ ಆರ್​ಸಿಬಿ ಫ್ರಾಂಚೈಸಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದು. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದೆ. ಇದನ್ನೂ ಓದಿ :ಏಕಾಏಕಿ ಮುರಿದು ಬಿತ್ತು ಸ್ಲೀಪರ್​ ಕೋಚ್​ ಬಸ್​ ಸೀಟ್​; KSRTCಗೆ ಹಿಡಿಶಾಪ ಹಾಕಿದ ಪ್ರಯಾಣಿಕರು

ಈ ಕುರಿತು ಆರ್​ಸಿಬಿ ಟ್ವಿಟ್​ ಮಾಡಿದ್ದು, ಇದರಲ್ಲಿ ” ನಿನ್ನೆ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ, ಈ ಘಟನೆ ಆರ್​ಸಿಬಿ ಕುಟುಂಬಕ್ಕೆ ಬಹಳ ನೋವುಂಟು ಮಾಡಿದೆ. ಮೃತಪಟ್ಟ ಆರ್​ಸಿಬಿ ಅಭಿಮಾನಿಗಳ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದೆ. ಇದನ್ನೂ ಓದಿ :ಜನ ಪ್ರಾಣ ಕಳ್ಕೊಂಡಿದ್ದಾರೆ, ಒಳಗೆ ಸೆಲಬ್ರೇಷನ್​ ಯಾಕ್​​ ಬೇಕಿತ್ತು; 1 ಕೋಟಿ ಪರಿಹಾರಕ್ಕೆ ಆಗ್ರಹಿಸಿದ ಬಿ,ಕೆ ಹರಿಪ್ರಸಾದ್​

ಇದಲ್ಲದೆ ಈ ದುರಂತದಲ್ಲಿ ಗಾಯಗೊಂಡಿರುವ ಅಭಿಮಾನಿಗಳನ್ನು ಬೆಂಬಲಿಸಲು ಆರ್‌ಸಿಬಿ ಕೇರ್ಸ್ ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ. ನಾನು ಮಾಡುವ ಪ್ರತಿ ಕೆಲಸದಲ್ಲಿ ನಮ್ಮ ಅಭಿಮಾನಿಗಳು ಹೃದಯದಲ್ಲಿರುತ್ತಾರೆ. ನಾವು ಈ ದುಃಖದಲ್ಲಿ ನಿಮ್ಮ ಜೊತೆ ಇರುತ್ತೇವೆ ಎಂದು ಟ್ವಿಟ್​ ಮಾಡಿ ಮಾಹಿತಿ ಹಂಚಿಕೊಂಡಿದೆ.

RELATED ARTICLES

Related Articles

TRENDING ARTICLES