ಬೆಂಗಳೂರು: ಆರ್ಸಿಬಿ ಸಂಭ್ರಮಚರಣೆಗೆ ಎಂದು ನಿನ್ನೆ ಲಕ್ಷಾಂತರ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆಗಮಿಸಿದ್ದರು. ಈ ವೇಳೆ ನೂಕು ನುಗ್ಗಲು ಉಂಟಾಗಿ, ಕಾಲ್ತುಳಿತದಲ್ಲಿ 11 ಮಂದಿ ಅಸುನೀಗಿದ್ದರು. ಇದೀಗ ಆರ್ಸಿಬಿ ಫ್ರಾಂಚೈಸಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದು. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದೆ. ಇದನ್ನೂ ಓದಿ :ಏಕಾಏಕಿ ಮುರಿದು ಬಿತ್ತು ಸ್ಲೀಪರ್ ಕೋಚ್ ಬಸ್ ಸೀಟ್; KSRTCಗೆ ಹಿಡಿಶಾಪ ಹಾಕಿದ ಪ್ರಯಾಣಿಕರು
ಈ ಕುರಿತು ಆರ್ಸಿಬಿ ಟ್ವಿಟ್ ಮಾಡಿದ್ದು, ಇದರಲ್ಲಿ ” ನಿನ್ನೆ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ, ಈ ಘಟನೆ ಆರ್ಸಿಬಿ ಕುಟುಂಬಕ್ಕೆ ಬಹಳ ನೋವುಂಟು ಮಾಡಿದೆ. ಮೃತಪಟ್ಟ ಆರ್ಸಿಬಿ ಅಭಿಮಾನಿಗಳ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದೆ. ಇದನ್ನೂ ಓದಿ :ಜನ ಪ್ರಾಣ ಕಳ್ಕೊಂಡಿದ್ದಾರೆ, ಒಳಗೆ ಸೆಲಬ್ರೇಷನ್ ಯಾಕ್ ಬೇಕಿತ್ತು; 1 ಕೋಟಿ ಪರಿಹಾರಕ್ಕೆ ಆಗ್ರಹಿಸಿದ ಬಿ,ಕೆ ಹರಿಪ್ರಸಾದ್
𝗢𝗳𝗳𝗶𝗰𝗶𝗮𝗹 𝗦𝘁𝗮𝘁𝗲𝗺𝗲𝗻𝘁: 𝗥𝗼𝘆𝗮𝗹 𝗖𝗵𝗮𝗹𝗹𝗲𝗻𝗴𝗲𝗿𝘀 𝗕𝗲𝗻𝗴𝗮𝗹𝘂𝗿𝘂
The unfortunate incident in Bengaluru yesterday has caused a lot of anguish and pain to the RCB family. As a mark of respect and a gesture of solidarity, RCB has announced a financial… pic.twitter.com/C50WID1FEI
— Royal Challengers Bengaluru (@RCBTweets) June 5, 2025
ಇದಲ್ಲದೆ ಈ ದುರಂತದಲ್ಲಿ ಗಾಯಗೊಂಡಿರುವ ಅಭಿಮಾನಿಗಳನ್ನು ಬೆಂಬಲಿಸಲು ಆರ್ಸಿಬಿ ಕೇರ್ಸ್ ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ. ನಾನು ಮಾಡುವ ಪ್ರತಿ ಕೆಲಸದಲ್ಲಿ ನಮ್ಮ ಅಭಿಮಾನಿಗಳು ಹೃದಯದಲ್ಲಿರುತ್ತಾರೆ. ನಾವು ಈ ದುಃಖದಲ್ಲಿ ನಿಮ್ಮ ಜೊತೆ ಇರುತ್ತೇವೆ ಎಂದು ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿದೆ.