ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್ಎ ಇವೆಂಟ್ ಮ್ಯಾನೇಜಮೆಂಟ್ನ ಸಿಬ್ಬಂದಿ ಕಿರಣ್, ಸುಮಂತ್ ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದು. ನಿಖಿಲ್ ಸೋಸಲೆಯನ್ನು ವಿಮಾನ ನಿಲ್ದಾಣದಲ್ಲಿ ಬಂಧನ ಮಾಡಲಾಗಿದೆ. ಇದನ್ನೂ ಓದಿ :ಉತ್ತರಾಖಂಡ್; ಸ್ವಂತ ಮಗಳ ಮೇಲೆ ಬಾಯ್ಫ್ರೆಂಡ್ನಿಂದ ಅತ್ಯಾಚಾರ ಮಾಡಿಸಿದ ತಾಯಿ..!
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿರುವ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಚರಣೆಗೆ ಇಳಿದಿದ್ದು. ಘಟನೆಗೆ ಕಾರಣರಾದ ಆರೋಪದ ಮೇಲೆ RCB, KSCA ಮತ್ತು DNA ಸಂಸ್ಥೆಗಳ ಸಿಬ್ಬಂದಿಗಳನ್ನ ಬಂಧಿಸಿದ್ದಾರೆ. ಆರ್ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಬಂಧನ ಭೀತಿಯಿಂದ ಪಾರಾಗಲು ಮುಂಬೈಗೆ ಪ್ರಯಾಣಿಸುತ್ತಿದ್ದ ವೇಳೆ ವಿಮಾನ ನಿಲ್ದಾಣದಲ್ಲಿ ಬಂಧನ ಮಾಡಿದ್ದಾರೆ.
ಬಂಧಿಸಿದ್ದು ಯಾಕೆ..!
ನಗರದ ಹೃದಯಭಾಗದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂಧಿ ಪ್ರಾಣ ಕಳೆದುಕೊಂಡಿದ್ದರು. ಆದರೆ ಈ ಘಟನೆಯಿಂದ ಆರ್ಸಿಬಿ ಫ್ರಾಂಚೈಸಿ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿತ್ತು. ಆದರೆ ಘಟನೆಗೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ವಿಕ್ಟರಿ ಪರೇಡ್ ನಡೆಸುವುದಾಗಿ ಆರ್ಸಿಬಿಯ ಸಾಮಾಜಿಕ ಜಾಲತಾಣ ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು. ಇದನ್ನೂ ಓದಿ :Stand with B Dayanand ; ಸರ್ಕಾರದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ಜೊತೆಗೆ ಸ್ಟೇಡಿಯಂನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜನರಿಗೆ ಉಚಿತ ಟಿಕೆಟ್ ಘೋಷಣೆಯನ್ನು ಮಾಡಲಾಗಿತ್ತು. ಆದರೆ ಟಿಕೆಟ್ ಎಲ್ಲಿ ಸಿಗುತ್ತದೆ ಎಂಬ ಮಾಹಿತಿ ಯಾರ ಬಳಿಯೂ ಇರಲಿಲ್ಲ. ನಂತರ ಗೇಟ್ 9 ಮತ್ತು 10 ರ ಬಳಿ ಮಧ್ಯಾಹ್ನ 1 ಗಂಟೆಯ ನಂತರ ಟಿಕೆಟ್ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಮಧ್ಯಾಹ್ನ 1 ಗಂಟೆಯಾದರೂ ಟಿಕೆಟ್ ವಿತರಣೆ ಪ್ರಕ್ರಿಯೆ ನಡೆದಿರಲಿಲ್ಲ. ಈ ಮಧ್ಯೆ ಮಧ್ಯಾಹ್ನ 3:14ಕ್ಕೆ ಆರ್ಸಿಬಿ ವೆಬ್ಸೈಟ್ನಲ್ಲಿ ಟಿಕೆಟ್ ಸಿಗಲಿದೆ ಎಂದು ಪೋಸ್ಟ್ ಮಾಡಲಾಗಿತ್ತು. ಇದನ್ನೂ ಓದಿ :ಅನುಮಾನಸ್ಪದ ರೀತಿಯಲ್ಲಿ ಮಂಗಳೂರಿನ ಬಿಜೆಪಿ ಮುಖಂಡ ಸಾವು; ಸಾವಿನ ಸುತ್ತ ಅನುಮಾನದ ಹುತ್ತ
ಇಷ್ಟೇಲ್ಲಾ ಗೋಜಲುಗಳಿಗೆ ಕಾರಣವಾದ ಆರ್ಸಿಬಿ ಮ್ಯಾನೇಜ್ಮೆಂಟ್ ಮತ್ತು ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ ವಿರುದ್ದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಘಟನೆ ಸಂಬಂಧ ನಾಲ್ವರನ್ನು ಬಂಧಿಸಿದ್ದು. ಆರೋಪಿಗಳನ್ನು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಿ, ನಂತರ ನ್ಯಾಯಲಯದ ಮುಂದೆ ಹಾಜರು ಪಡಿಸಿ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ.


