Sunday, October 27, 2024

ದೇವೇಗೌಡ್ರ ಮಾತಿಗೆ ಕುಮಾರಸ್ವಾಮಿ ಎದುರುತ್ತರ..!

ಯಾದಗಿರಿ : ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.ಡಿ ದೇವೇಗೌಡರ ಮಾತಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಎದುರುತ್ತರ ಕೊಟ್ಟಿದ್ದಾರೆ..!
”ರಾಜ್ಯದಲ್ಲಿ ದೋಸ್ತಿ ಸರ್ಕಾರ ಎಷ್ಟು ದಿನಗಳ ಕಾಲ ಇರುತ್ತೋ ಗೊತ್ತಿಲ್ಲ. ಮಧ್ಯಂತರ ಚುನಾವಣೆ ಬಗ್ಗೆ ಯಾವುದೇ ಸಂಶಯವೇ ಬೇಡ. ಎಲ್ಲವೂ ಕಾಂಗ್ರೆಸ್​ ಮುಖಂಡರ ಕೈಯಲ್ಲೇ ಇದೆ” ಅನ್ನೋ ದೇವೇಗೌಡರ ಹೇಳಿಕೆಗೆ ಸಿಎಂ ಪ್ರತಿಕ್ರಿಯಿಸಿದ್ದು, ”ಮಧ್ಯಂತರ ಚುನಾವಣೆ ನಡೆಯುವ ಪ್ರಶ್ನೆಯೇ ಇಲ್ಲ” ಅಂದಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಅವರು,” ಮಧ್ಯಂತರ ಚುನಾವಣೆ ನಡೆಯುವ ಪ್ರಶ್ನೆಯೇ ಇಲ್ಲ. 4 ವರ್ಷ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರುತ್ತೆ, ಅನುಮಾನ ಬೇಡ. ದೇವೇಗೌಡರು ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ ಎಂದಿದ್ದಾರೆ. ದೇವೇಗೌಡರ ಮಾತಿಗೆ ಅಪಾರ್ಥ ಬೇಡ” ಎಂದು ಸಮಜಾಯಿಷಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES