ಬೆಂಗಳೂರು : ಮೈತ್ರಿ ಸರ್ಕಾರದ ದುಸ್ಥಿತಿಗೆ ಸಿಎಂ ಕುಮಾರಸ್ವಾಮಿ ಮತ್ತು ರೇವಣ್ಣನವರೇ ಕಾರಣ ಎಂದು ವಸತಿ ಸಚಿವ ಎಂಟಿಬಿ ನಾಗರಾಜ್ ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವ್ರು, ಮೈತ್ರಿ ಸರ್ಕಾರದಲ್ಲಿ ಜೆಡಿಎಸ್ ಸರ್ವಾಧಿಕಾರಿ ಧೋರಣೆ ನಡೆಸುತ್ತಿದೆ. ಜೆಡಿಎಸ್ನವರು ಮೈತ್ರಿ ಧರ್ಮ ಪಾಲಿಸುತ್ತಿಲ್ಲ. ಕಾಂಗ್ರೆಸ್ ಶಾಸಕರಿಗೆ ಅನುದಾನವನ್ನೂ ನೀಡುತ್ತಿಲ್ಲ. ಜೆಡಿಎಸ್ ಮುಖಂಡರಿಗೆ ಇಷ್ಟಬಂದಂತೆ ಅಧಿಕಾರಿಗಳ ವರ್ಗಾವಣೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅತೃಪ್ತ ಶಾಸಕರ ಪರ ಬ್ಯಾಟ್ ಬೀಸಿದ ಎಂಟಿಬಿ ನಾಗರಾಜ್ ಕುಮಾರಸ್ವಾಮಿ ಆಡಳಿತದಿಂದ ಬೇಸತ್ತು ಅತೃಪ್ತರು ಮುಂಬೈಗೆ ಹೋಗಿದ್ದಾರೆ. ಅವರು ದುಡ್ಡಿಗಾಗಿ ಹೋದವರಲ್ಲ, ಅವರ ಬಳಿ ಹಣವಿದೆ ಎಂದಿದ್ದಾರೆ.