ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಬಿ.ಎಸ್ ಯಡಿಯೂರಪ್ಪ ರಾಜ್ಯದ ರೈತರಿಗೆ ಗಿಫ್ಟ್ ನೀಡಿದ್ದಾರೆ.
ಅಧಿಕಾರವಹಿಸಿಕೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಯಾಬಿನೆಟ್ ಮೀಟಿಂಗ್ನಲ್ಲಿ ಪ್ರಮುಖವಾದ ಎರಡು ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯ ಸರ್ಕಾರವೂ ಕೈ ಜೋಡಿಸುತ್ತಿದೆ. ಜೊತೆಗೆ ನೇಕಾರರ ಸಾಲಮನ್ನಾ ಮಾಡಲು ನಿರ್ಧರಿಸಿದ್ದೇವೆ ಅಂತ ತಿಳಿಸಿದ್ರು.
ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ 3 ಕಂತುಗಳಲ್ಲಿ 6 ಸಾವಿರ ರೂ ಅನ್ನು ರೈತರ ಖಾತೆಗೆ ಹಾಕುತ್ತಿದ್ದು, ಈ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ 2 ಕಂತುಗಳಲ್ಲಿ 4 ಸಾವಿರ ರೂ ನೀಡಲಾಗುತ್ತದೆ ಎಂದು ಘೋಷಿಸಿದರು. ಇದರೊಂದಿಗೆ ಕಿಸಾನ್ ಸಮ್ಮಾನ್ ಯೋಜನೆಯ ರಾಜ್ಯದ ಫಲಾನುಭವಿಗಳಿಗೆ 10 ಸಾವಿರ ರೂ ಸಿಗಲಿದೆ.
ಇನ್ನು ನೇಕಾರರ ಒಟ್ಟು 100 ಕೋಟಿ ರೂ ಸಾಲಮನ್ನಾ ಮಾಡಲಾಗುವುದು ಅಂತಲೂ ಬಿಎಸ್ವೈ ತಿಳಿಸಿದ್ದಾರೆ. ಜುಲೈ 29ರ ಸೋಮವಾರ ಅಧಿವೇಶನದಲ್ಲಿ ಬಹುಮತ ಸಾಬೀತು ಪಡಿಸುತ್ತೇವೆ. ಜೊತೆಗೆ ಅದೇ ದಿನ ಹಣಕಾಸು ಮೂಸೂದೆ ಅಂಗೀಕರಿಸುತ್ತೇವೆ ಅಂತಲೂ ಹೇಳಿದ್ರು.
ರೈತರಿಗೆ, ನೇಕಾರರಿಗೆ ಮೊದಲ ದಿನವೇ ಬಿಎಸ್ವೈ ಗಿಫ್ಟ್..!
TRENDING ARTICLES