Thursday, September 19, 2024

ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ : ಧೀರಜ್ ಮುನಿರಾಜು

ಬೆಂಗಳೂರು : ದೊಡ್ಡಬಳ್ಳಾಪುರ ಕ್ಷೇತ್ರದ ಜನರ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಮನವಿ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕೊಡಿಗೇಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮತದಾರರನ್ನುದ್ದೇಶಿಸಿ ಅವರು ಮಾತನಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ದೊಡ್ಡಬಳ್ಳಾಪುರದಲ್ಲಿ ಇಲ್ಲಿಯವರೆಗೆ ಉನ್ನತ ವಿದ್ಯಾಭ್ಯಾಸಕ್ಕೆ ಸೌಲಭ್ಯಗಳನ್ನು ಕಲ್ಪಿಸುವುದರಲ್ಲಿ ಹಾಲಿ ಶಾಸಕರು ವಿಫಲರಾಗಿದ್ದಾರೆ. ನಾನು ಶಾಸಕನಾಗಿ ಆಯ್ಕೆ ಆಗಿ ಬಂದರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೊದಲು ಉನ್ನತ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ‘ನನ್ನ ತಮ್ಮ ಧೀರಜ್’ ಶಾಸಕನಾಗುವುದು ನಿಶ್ಚಿತ : ಸಿ.ಟಿ ರವಿ ವಿಶ್ವಾಸ

ನೇರವಾಗಿ ಕೈಗೆ ಸಿಗುವ ಯುವ ನಾಯಕ

ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕರ ಕುಂದುಕೊರತೆ, ಸಮಸ್ಯೆಗಳು ಆಲಿಸಲು ಡಿ ಕ್ರಾಸ್ ಮೇಲ್ಸೇತುವೆ ಬಳಿ ವಾಸವಾಗಿರುವ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಎಲ್ಲರ ಕೈಗೆ ನೇರವಾಗಿ ಸಿಗುವ ಯುವ ನಾಯಕ. ಅನ್ಯ ಪಕ್ಷದ ಅಭ್ಯರ್ಥಿಗಳನ್ನು ಭೇಟಿ ಮಾಡಬೇಕೆಂದ್ರೆ ಅವರ ಪಕ್ಷದ ಎಜೆಂಟ್ ಗಳನ್ನು ಹಿಡಿದು 30 ಕಿಲೋ ಮೀಟರ್ ಪ್ರವಾಸ ಮಾಡಬೇಕಾಗುತ್ತೆ ಎಂದು ಮತದಾರರು ಇದೇ ವೇಳೆ ಹೇಳಿದ್ದಾರೆ.

ದೊಡ್ಡಬಳ್ಳಾಪುರ ಮತಕ್ಷೇತ್ರದ ಕಸಬಾ ಹೋಬಳಿ ಕೊಡಿಗೇಹಳ್ಳಿ ಪಂಚಾಯತಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಧಿರಜ್ ಮುನಿರಾಜು ಮತಯಾಚನೆ ಮಾಡಿದರು. ಇದಕ್ಕೂ ಮುನ್ನ ಹಣಬೆ ಮತ್ತು ತಿಪ್ಪೂರು ಪಂಚಾಯಿತಿ ಗ್ರಾಮ ಪಂಚಾಯಿತಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.

RELATED ARTICLES

Related Articles

TRENDING ARTICLES