Friday, September 20, 2024

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ; ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಶಿವಮೊಗ್ಗ : ವಿದ್ಯುತ್ ಕಂಬಕ್ಕೆ ಬಸ್​ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದ ಗೆಣಸಿನಕುಣಿ ಗ್ರಾಮದ ಬಳಿ ನಡೆದಿದೆ.

ಬಹುತೇಕ ವಿದ್ಯಾರ್ಥಿಗಳೇ ತುಂಬಿದ್ದ ಖಾಸಗಿ ಬಸವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಸಿಗಂದೂರು ಲಾಂಚ್ ನಿಲ್ಲುವ ಹೊಳೆಬಾಗಿಲು ಗ್ರಾಮದಿಂದ ಸಾಗರಕ್ಕೆ ಈ ಖಾಸಗಿ ಬಸ್ ಬರುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದ್ದು, ಬಸ್​ನಲ್ಲಿದ್ದ 45 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನು ಓದಿ : ಗಾಂಜಾ ಮಿಕ್ಸ್ ಮಾಡಿ ಚಾಕೋಲೆಟ್ ಮಾರುತ್ತಿದ್ದ ಗ್ಯಾಂಗ್ ಲಾಕ್

ಬಸ್​ನಲ್ಲಿ ಸಾಗರದ ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದ ವಿರ್ಥಿಗಳೇ ಹೆಚ್ಚಾಗಿ ಇದ್ದರು. ಸುಮಾರು 35 ಜನ ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್ ಹೊಡೆದಿದೆ. ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಸದ್ಯ  ಗಾಯಾಳುಗಳಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES

Related Articles

TRENDING ARTICLES