Friday, September 20, 2024

ಮಹಾರಾಜ ಟ್ರೋಫಿ : ಫೈನಲ್​ಗೆ ಲಗ್ಗೆಯಿಟ್ಟ ಮನೀಶ್ ಪಡೆ

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ-20 ಟೂರ್ನಿಯ ಸೆಮಿಫೈನಲ್​ನಲ್ಲಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ.

ಶಿವಮೊಗ್ಗ ಲಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಮನೀಶ್ ಪಾಂಡೆ, ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶಿವಮೊಗ್ಗ ಲಯನ್ಸ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹನ್ ಕದಮ್ ಹಾಗೂ ನಿಹಾಲ್ ಉಳ್ಳಾಲ್ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದರು.

150 ರನ್​ಗಳ ಸುಲಭ ಗುರಿ ಬೆನ್ನತ್ತಿದ ಹುಬ್ಬಳ್ಳಿ ಟೈಗರ್ಸ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಶ್ರೀಜಿತ್ 39 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 61 ರನ್​ ಸಿಡಿಸಿ 14 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಗೆಲುವಿನೊಂದಿಗೆ ಮನೀಶ್ ಪಾಂಡೆ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ.

RELATED ARTICLES

Related Articles

TRENDING ARTICLES