Friday, October 18, 2024

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಸಿಕ್ಕ ಬಾಕ್ಸ್ ನಲ್ಲಿ ಇದಿದ್ದು ಉಪ್ಪು : ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್

ಶಿವಮೊಗ್ಗ: ರೈಲು ನಿಲ್ದಾಣದ ಪಾರ್ಕಿಂಗ್ ಸ್ಥಳದ ಸಮೀಪ ಅನುಮಾನಾಸ್ಪದವಾಗಿ ಇಟ್ಟಿದ್ದ ಎರಡು ಕಬ್ಬಿಣದ ಬಾಕ್ಸ್‌ಗಳಲ್ಲಿ ಇಡಲಾಗಿದ್ದ ಬಿಳಿ ಬಣ್ಣದ ಪುಡಿ ಉಪ್ಪು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್ ತಿಳಿಸಿದ್ದಾರೆ.

ಬಾಕ್ಸ್ ಇಟ್ಟಿದ್ದ ಆರೋಪಿಗಳ ಪ್ರಾಥಮಿಕ ವಿಚಾರಣೆಯಲ್ಲಿ ಈ ಸಂಗತಿ ತಿಳಿದುಬಂದಿದೆ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಬೆಳಗಿನ ಜಾವ 4 ಗಂಟೆ ವೇಳೆಗೆ ಬಾಕ್ಸ್‌ಗಳ ಬೀಗ ಸ್ಫೋಟಿಸಿ ಅದನ್ನು ತೆಗೆದಾಗ ಕೆಲವು ನಿರುಪಯುಕ್ತ ವಸ್ತುಗಳು ಹಾಗೂ ಬಿಳಿ ಪುಡಿ ಪತ್ತೆಯಾಗಿತ್ತು.

 

 

RELATED ARTICLES

Related Articles

TRENDING ARTICLES