ಹಾಸನ : ಜಮೀನು ವಿವಾದಕ್ಕೆ ಶುರುವಾದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಅರೆಹಳ್ಳಿಯಲ್ಲಿ ನಡೆದಿದೆ.
ಅರೆಹಳ್ಳಿ ಗ್ರಾಮದ ಕೇಶವ ನಗರದ ನಿವಾಸಿ ಸಂಗಯ್ಯ (58) ಕೊಲೆಯಾದ ಸಹೋದರ. ಸಂಗಯ್ಯ ಸಹೋದರ ಈರಯ್ಯ ಕೊಲೆ ಮಾಡಿರುವ ಆರೋಪಿ.
ಜಮೀನು ವಿವಾದ ಹಿನ್ನಲೆಯಲ್ಲಿ ಅಣ್ಣನೇ ತಮ್ಮನನ್ನು ಕೊಚ್ಚಿ ಕೊಂದಿದ್ದಾನೆ. ಅರೆಹಳ್ಳಿಯ ಗೂರ್ಗಿಹಳ್ಳಿ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ. ಮಚ್ಚಿನಲ್ಲಿ ಹಲ್ಲೆ ಮಾಡಿ ಹತ್ಯೆ ಬರ್ಬರವಾಗಿ ಹತ್ಯೆಗೈದಿದ್ದಾನೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅರೆಹಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿನೆ ನಡೆಸಿದ್ದಾರೆ. ಕೊಲೆ ಆರೋಪಿ ಈರಯ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಅರೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.