ಮೈಸೂರು: ದಾರಿ ತಪ್ಪಿ ಕಾಡಿನಿಂದ ನಾಡಿಗೆ ಬಂದ ಜಿಂಕೆಯೊಂದು ನಾಯಿಗಳ ದಾಳಿಗೆ ಬಲಿಯಾದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.
ಸುಮಾರು ಎರಡುವರೆ ವರ್ಷದ ಹೆಣ್ಣು ಜಿಂಕೆ ಕಾಡಿನ ಭಾಗದಿಂದ ನಾಡಿಕೆ ಬಂದಿತ್ತು. ಆಗ ಊರಿನ ನಾಯಿಗಳು ಸೇರಿ ಅದರ ಮೇಲೆ ದಾಳಿ ಮಾಡಿವೆ. ಜಿಂಕೆಯ ಕತ್ತು, ತೊಡೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ನಾಯಿಗಳು ಅಂತಿಮವಾಗಿ ಜೀವವನ್ನೇ ಬಲಿ ಪಡೆದಿವೆ.
ಇದನ್ನೂ ಓದಿ: Rameshwaram Cafe: ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಐವರು ಆಸ್ಪತ್ರೆಗೆ ದಾಖಲು
ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರು ಧಾವಿಸಿ ನಾಯಿಗಳನ್ನು ಓಡಿಸಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್, ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.