Friday, September 20, 2024

ಮಂಜುನಾಥ್ ವ್ಯಕ್ತಿತ್ವಕ್ಕೆ ಕಳಂಕ ತರುವ ಕೆಲಸ ನಾವು ಮಾಡಲ್ಲ : ಇದು ದೊಡ್ಡಗೌಡ್ರು ದೊಡ್ಡತನ

ಬೆಂಗಳೂರು : ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ರಾಜಕೀಯ ಪ್ರವೇಶದ ಬಗ್ಗೆ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಮಂಜುನಾಥ್ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ತೀರ್ಮಾನ ನಾವು ಮಾಡಲ್ಲ ಎಂದು ಹೇಳಿದ್ದಾರೆ.

ಇಡೀ ದೇಶಾದ್ಯಂತ ತಮ್ಮದೇ ಆದ ಹೆಸರು ಮಾಡಿರೋರು ಮಂಜುನಾಥ್. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ಅಂಥವರು ಬರೋದು ಸರಿಯಲ್ಲ. ಅವರಿಗೆ ದೇಶದಲ್ಲಿ ಒಂದು ಒಳ್ಳೆಯ ಸ್ಥಾನಮಾನವಿದೆ. ಮುಗಿಲಿತ್ತರದ ಹೆಸರಿದೆ ಇಂತಹ ಸಮಯದಲ್ಲಿ ರಾಜಕೀಯ ಪ್ರವೇಶ ಮಾಡಿ ಅಂತ ಒತ್ತಾಯಿಸುವುದಿಲ್ಲ. ರಾಜಕೀಯಕ್ಕೆ ಬರೋದಕ್ಕೆ ಅವರು ಸಮ್ಮತಿ ಸೂಚಿಸಿಲ್ಲ ಎಂದು ತಿಳಿಸಿದ್ದಾರೆ.

HDK ಸ್ಪರ್ಧೆ ಬಗ್ಗೆ ಮೋದಿ ತೀರ್ಮಾನ

ಮೈತ್ರಿ ಸೀಟು ಹಂಚಿಕೆ ಹಾಗೂ ಕುಮಾರಸ್ವಾಮಿ ಸ್ಪರ್ಧೆ ವಿಚಾರ ಕುರಿತು ಮಾತನಾಡಿ, ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗುತ್ತದೆ. ಯಾವ್ಯಾವ ಕ್ಷೇತ್ರ ಅನ್ನೋದನ್ನು ಅಮಿತ್ ಶಾ ಹಾಗೂ ಜೆ.ಪಿ. ನಡ್ಡಾ ತೀರ್ಮಾನ ಮಾಡ್ತಾರೆ. ಕುಮಾರಸ್ವಾಮಿ ಸ್ಪರ್ಧೆ ವಿಚಾರವನ್ನು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಕೂತು ಚರ್ಚೆ ಮಾಡ್ತಾರೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಹಾಕಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, I don’t want to react ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES