ರಾಮನಗರ : ರಾಮನಗರದಲ್ಲಿ ‘ಕಾಟೇರ’ ಚಿತ್ರದ ರೀತಿಯಲ್ಲೇ ಮನುಷ್ಯರ ತಲೆ ಬುರುಡೆ ಪತ್ತೆಯಾಗಿವೆ. ಒಂದೇ ಮನೆಯಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 25 ತಲೆ ಬುರುಡೆ, ಅಸ್ಥಿಪಂಜರ ಪತ್ತೆಯಾಗಿದೆ. ಇದನ್ನು ಕಂಡು ಜನ ಬೆಚ್ಚಿಬಿದ್ದಿದ್ದಾರೆ.
ಹೌದು, ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಲರಾಮ್ ಎಂಬ ವ್ಯಕ್ತಿ ತಲೆ ಬುರುಡೆ ಸಂಗ್ರಹ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.
ಬಲರಾಮ್ ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ, ಮಂತ್ರ ಮಾಡುತ್ತಾನೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಆರೋಪಿ ಬಲರಾಮ್ನನ್ನು ವಶಕ್ಕೆ ಪಡೆದಿದ್ದಾರೆ.
ಅಮಾವಾಸ್ಯೆ ಪೂಜೆ ಮಾಡುತ್ತಿದ್ದಾಗ ಸೆರೆ
ಶಿವರಾತ್ರಿ ಅಮಾವಸ್ಯೆ ನಿನ್ನೆಯಷ್ಟೇ ಮುಗಿದಿದೆ. ನಿನ್ನೆ ರಾತ್ರಿ ಅಮಾವಾಸ್ಯೆ ಪೂಜೆ ಮಾಡುತ್ತಿದ್ದಾಗ ಗ್ರಾಮಸ್ಥರು ಬಲರಾಮ್ ನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಲರಾಮ್ ಹಾಗೂ ಆತನ ಸಹೋದರ ರವಿ ಎಂಬಾತನನ್ನ ಬಿಡದಿ ಪೊಲೀಸರು ಬಂಧಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? : ವೆಡ್ಡಿಂಗ್ ಆನಿವರ್ಸರಿ ಗಿಫ್ಟ್ ಕೊಡದ ಗಂಡ : ಕೋಪಗೊಂಡು ಚಾಕುವಿನಿಂದ ಇರಿದ ಹೆಂಡತಿ
ತಾತನ ಕಾಲದಿಂದಲೂ ಬುರುಡೆ ಪೂಜೆ
ಆರೋಪಿ ಬಲರಾಮ್ ರಾತ್ರಿ ವೇಳೆ ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದನು. ತೋಟದ ಮನೆಯಲ್ಲಿ ಅನೇಕ ಮನುಷ್ಯರ ತಲೆ ಬುರಡೆಗಳು ಪತ್ತೆಯಾಗಿವೆ. ನನ್ನ ತಾತನ ಕಾಲದಿಂದಲೂ ಬುರುಡೆ ಪೂಜೆ ಮಾಡುತ್ತಾ ಬಂದಿದ್ದೇವೆ ಎಂದು ಆರೋಪಿ ಬಲರಾಮ್ ಹೇಳಿದ್ದಾನೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.