ಕಾರವಾರ : ಸಂವಿಧಾನ ತಿದ್ದುಪಡಿಯ ವಿಚಾರ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದ್ದಂತೆ ಬಿಜೆಪಿಗೆ ಭಾರಿ ಮುಜುಗರ ಆಗಿದೆ. ಪಕ್ಷಕ್ಕೆ ಆಗಿರುವ ಮುಜುಗರ ತಪ್ಪಿಸಲು ಸಂಸದ ಅನಂತಕುಮಾರ್ ಹೆಗಡೆ ಮಾಧ್ಯಮಗಳನ್ನು ಬೇವರ್ಸಿ ಎಂದು ನಾಲಗೆ ಹರಿಬಿಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಇರಬೇಕು ಎಂದು ಹೇಳಿದ್ದಾರೆ.
ಮಾಧ್ಯಮಗಳು ಏನೂ ಬೇಕಾದ್ರೂ ಬರೆದುಕೊಳ್ಳಲಿ. ಬೇಕಾದ್ರೆ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ. ಸಾಮಾಜಿಕ ಜಾಲತಾಣದಲ್ಲಿ ಬೇಕಾದ ಚರ್ಚೆ ಆಗಲಿ. ಆದ್ರೆ, ನೇವೆಲ್ಲ ಇದಕ್ಕೆ ವಿಚಲಿತರಾಗಬಾರದು ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ.
ಆನೆ ನಡೆದಿದ್ದೇ ದಾರಿ ಎಂಬಂತೆ ನಡೆಯಬೇಕು
ನೀವು ಯಾವುದೋ ಸಾಮಾನ್ಯ ಪಕ್ಷದ ಕಾಯರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಬೇರೆ ಯಾರೋ ಪತ್ರಿಕೆಯಲ್ಲಿ, ವಾಟ್ಸಪ್ನಲ್ಲಿ ಏನೇನೋ ಹೇಳಿದ್ರು ಅಂತ ವಿಚಲಿತರಾಗಬಾರದು. ಆನೆ ನಡೆದಿದ್ದೇ ದಾರಿ ಎಂಬಂತೆ ನಾವು ನಡೆಯಬೇಕು ಕಣ್ರಿ ಎಂದು ಕಿಡಿಕಾರಿದ್ದಾರೆ.
ಆನೆ ನಡಿತಾ ಇದ್ರೆ ನಾಯಿಗಳು ಬೋಗಳುತ್ತವೆ
ಆನೆ ನಡಿತಾ ಇದ್ರೆ ನಾಯಿಗಳು ಬೋಗಳುತ್ತಾ ಇರುತ್ತವೆ. ಆನೆ ನಡಿತಾ ಇದ್ರೆ ಯಾವಗಲಾದರೂ ನಾಯಿ ಕಡೆ ಗಮನ ಕೊಡುತ್ತಾ..? ನಾಯಿಗಳಿಗೂ ಗೊತ್ತು.. ನಾವು ಎಷ್ಟೇ ಬೊಗಳಿದ್ರು ಆನೆಗೆ ಏನು ಮಾಡೋಕೆ ಆಗಲ್ಲ ಅಂತ. ನಾಯಿಗಳು ಬೋಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ ಎಂದ ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ.