Saturday, May 11, 2024

ಬಾಲ್ಯವಿವಾಹಕ್ಕೆ ನಿರಾಕರಣೆ; ಪತ್ನಿ ಕಾಲು ಮುರಿದ ಪತಿ

ಬೆಳಗಾವಿ : ಮಗಳಿಗೆ ಬಾಲ್ಯವಿವಾಹ ಮಾಡಿಸುವುದು ಬೇಡ ಅಂದಿದ್ದಕ್ಕೆ ಗಂಡ-ಹೆಂಡತಿ ನಡುವೆ ಜಗಳವಾಗಿದ್ದು, ಪತಿ ತನ್ನ ಪತ್ನಿ ಕಾಲು ಮುರಿದು ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ.

ಮಗಳಿಗೆ ಕೇವಲ 13 ವರ್ಷ ತುಂಬಿದೆ. ವಯಸ್ಸು ಚಿಕ್ಕದು ಮದುವೆ ಬೇಡ. ಮಗಳನ್ನು ಚನ್ನಾಗಿ ಓದಿಸೋಣ ಎಂದು ಹೇಳಿದಕ್ಕೆ ಬೀರಪ್ಪ ಎಂಬ ವ್ಯಕ್ತಿ ತನ್ನ ಹೆಂಡತಿ ಮಾಯವ್ವಾಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ: ಗಾಳಿ ಆಂಜನೇಯ ದೇವಾಲಯ ಆಡಳಿತ ಮಂಡಳಿ ಸದಸ್ಯರಿಂದ ಕಂತೆ ಕಂತೆ ಹುಂಡಿ ಹಣ ಕಳ್ಳತನ!

ಸದ್ಯ, ಮಾಯವ್ವಾ ಬೈಲಹೊಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೂರು ದಾಖಲಿಸಿದ್ದರೂ ಪೊಲೀಸರಿಂದ ಯಾವುದೇ ಕ್ರಮ ಜರುಗಿಲ್ಲ. ಇದಕ್ಕೆಲ್ಲಾ ಸೂತ್ರಧಾರಿ ಬೀರಪ್ಪನ ಅಣ್ಣ ಹಾಗೂ ಅವನ ಹೆಂಡತಿ ಮನೆಯವರು ಎಂದು ಮಾಯವ್ವಾ ಆರೋಪ ಮಾಡಿದ್ದಾರೆ. ಪ್ರಕರಣ ದಾಖಲಾದರೂ ಪೋಲಿಸರು ಅವರನ್ನ ಬಂಧಿಸಿಲ್ಲ ಅಂತಾ ಮಹಿಳೆ ಆಕ್ರೋಶ ಹೊರ ಹಾಕಿದ್ದಾರೆ. ಮುರಗೋಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES