ಬೆಂಗಳೂರು: ಯಶವಂತಪುರ ರೇಲ್ವೇ ನಿಲ್ದಾಣದ ಪ್ಲಾಟ್ಫಾರಂ 6 ರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.
ಹೌದು,ಯಶವಂತಪುರ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಎರಡು ಕಂಟೇನರ್ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್ಫಾರ್ಮ್ ಆರರಲ್ಲಿ ನಿಂತಿದ್ದ ಒಂದು ಬೋಗಿಯಲ್ಲಿ ಕ್ಯಾಂಟೀನ್ ನಡೆಸಲಾಗಿತ್ತು ಹಾಗೂ ಇನ್ನೊಂದು ಬೋಗಿಯಲ್ಲಿ ಕ್ಯಾಂಟೀನ್ ನಡೆಸಲು ಬೇಕಾದ ಪದಾರ್ಥಗಳನ್ನು ಇಡಲಾಗಿತ್ತು.
ಇದನ್ನೂ ಓದಿ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ನೀರು ಪಾಲು
ಈ ವೇಳೆಯಲ್ಲಿ ಘಟನೆ ನಡೆದದ್ದು,ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರ.