Monday, May 20, 2024

ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ : ಅಯ್ಯರ್ ಪಡೆಗೆ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆ

ಬೆಂಗಳೂರು : ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ವಿಶಾಖಪಟ್ಟಣ ಕ್ರೀಡಾಂಗಣದಲ್ಲಿ ಐಪಿಎಲ್​ನ 16ನೇ ಪಂದ್ಯ ನಡೆಯುತ್ತಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯೊಂದಿಗೆ ಡೆಲ್ಲಿ ಜೊತೆ ಕಾದಾಡುತ್ತಿದೆ.

ಡೆಲ್ಲಿ ಕ್ಯಾಪಿಟಲ್ಸ್ ಈವರೆಗೆ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದೆ. ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಜಯ ಸಾಧಿಸುವ ಮೂಲಕ ಗೆಲುವಿನ ಹಳಿಗೆ ಮರಳಿದೆ. ಇತ್ತ, ಕೋಲ್ಕತ್ತಾ ಈವರೆಗೆ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿದೆ.

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI)

ರಿಷಭ್ ಪಂತ್(ನಾಯಕ/ವಿ.ಕೀ.), ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ರಸಿಖ್ ದಾರ್ ಸಲಾಂ, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI)

ಶ್ರೇಯಸ್ ಅಯ್ಯರ್ (ನಾಯಕ), ಫಿಲಿಪ್ ಸಾಲ್ಟ್ (ವಿ.ಕೀ.), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ರಘುವಂಶಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

RELATED ARTICLES

Related Articles

TRENDING ARTICLES