ಬೆಂಗಳೂರು : ಹಾಸನ ಜಿಲ್ಲೆ ಅರಸೀಕೆರೆಯ ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಯುಗಾದಿ ಬಳಿಕ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಒಂದು ತಿಂಗಳು ಕಳೆದ ಮೇಲೆ ಮಳೆ, ಬೇಳೆ ಬಗ್ಗೆ ಗೊತ್ತಾಗಲಿದೆ ಎಂಬ ಶುಭ ಸುದ್ದಿ ನೀಡಿದ್ದಾರೆ. ಅಲ್ಲದೇ, ಧಾರ್ಮಿಕ ಮುಖಂಡನ ಸಾವು ಕೂಡ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ಬಿಸಿಲಿನಿಂದ ತತ್ತರಿಸಿರುವ ಜನರಿಗೆ, ರೈತರಿಗೆ ಕೋಡಿಶ್ರೀ ಭವಿಷ್ಯ ಕೊಂಚ ನೆಮ್ಮದಿ ತಂದಿದೆ. ಇನ್ನೂ, ರಾಜ್ಯ ರಾಜಕೀಯದ ಬಗ್ಗೆ ಯುಗಾದಿ ಹಬ್ಬದ ಬಳಿಕ ಭವಿಷ್ಯ ನುಡಿಯುವುದಾಗಿ ಶ್ರೀಗಳು ತಿಳಿಸಿದ್ದಾರೆ.
ಬೆಂಕಿ ಹಾವಳಿ, ನೀರಿನ ಸಮಸ್ಯೆ
ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ ಹಾವಳಿ, ನೀರಿನ ಸಮಸ್ಯೆ, ಯುದ್ದ ಆಗುತ್ತೆ. ಅನೇಕ ಸಾವು ನೋವುಗಳು ಆಗುತ್ತೆ ಎಂದು ಈ ಹಿಂದೆ ಕೋಲಾರದಲ್ಲಿ ಕೋಡಿಶ್ರೀ ಹೇಳಿದ್ದರು. ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಅಲ್ಲದೇ ಮತಾದಂತೆ ಹೆಚ್ಚಾಗುತ್ತದೆ. ಧಾರ್ಮಿಕ ಮುಖಂಡನ ಸಾವು ಆಗುತ್ತದೆ ಎಂದು ಭವಿಷ್ಯ ನುಡಿದಿದ್ದರು. ಇತ್ತೀಚೆಗಷ್ಟೇ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಕೂಡ ಆಗಿತ್ತು. ಇದೀಗ ರಾಜ್ಯದಲ್ಲಿ ನೀರಿನ ಸಮಸ್ಯೆ ಉಂಟಾಗಿದೆ.