ಬೆಂಗಳೂರು : ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ಇಲ್ಲಿನ ಸಾರಾಯಿಪಾಳ್ಯದ ಮನೆಯೊಂದರಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಮನೆಯಿಂದ ಬೆಂಕಿ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರು ಹಾಗೂ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ, ಕೂಡಲೆ ಕಾರ್ಯಪ್ರವೃತ್ತರಾದ ಅವರ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
ಸ್ಥಳೀಯರ ಪ್ರಕಾರ ಘಟನೆ ಸಂಭವಿಸಿದ ಮನೆಯಲ್ಲಿ ಯಾರೂ ಇರಲಿಲ್ಲ. ಗ್ಯಾಸ್ ಸೋರಿಕೆ ಅಥವಾ ಶಾರ್ಟ್ ಸರ್ಕೀಟ್ ಕಾರಣಕ್ಕೆ ಬೆಂಕಿ ಹೊತ್ತಿಕೊಂಡಿರಬಹುದು. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ ಕಾರಣ ಹೆಚ್ಚಿನ ಅನಾಹುತ ಆಗುವುದ ತಪ್ಪಿದೆ.
ಇದನ್ನೂ ಓದಿ: ಮುಂದಿನ ಆರು ದಿನಗಳ ಕಾಲ ಮಳೆ ಸಾಧ್ಯತೆ!: ಹವಾಮಾನ ಇಲಾಖೆ
ಎರಡು ಮಹಡಿಯ ಮನೆಯ ಮೇಲಿನ ಅಂತಸ್ತಿನದಲ್ಲಿ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಹಾಗೂ ಬೆಂಕಿಯ ಜ್ವಾಲೆಯು ಮನೆಯಿಂದ ಹೊಸ ಸೂಸಿದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸುವ ಅವಕಾಶವ ಇಲ್ಲ ಎಂಬುದಾಗಿ ಸ್ಥಳದಲ್ಲಿದ್ದ ಅಧಿಕಾರಿಗಳು ತಿಳಿಸಿದ್ದಾರೆ.