ಕಲಬುರಗಿ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ.
ಈರಣ್ಣ ಬಡಿಗೇರ (38) ಎಂಬಾತ ಕೊಲೆಯಾದ ಕಾರ್ಪೆಂಟರ್ ಆಗಿದ್ದಾನೆ. ಬೆಳಗ್ಗೆ ನೀರು ತರಲು ಹೋಗ್ತಿದ್ದ ಈರಣ್ಣ ಬಡಿಗೇರ ಮೇಲೆ ಕೊಲೆ ಮಾಡಲಾಗಿದೆ. ಪಕ್ಕದ ಮನೆಯ ನಿವಾಸಿ ನಾಗಯ್ಯಸ್ವಾಮಿ ಮಠಪತ್ತಿಯಿಂದ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ವಾಟರ್ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು!
ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ, ಸದ್ಯ ಘಟನೆ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.