ಬೆಂಗಳೂರು : ಶ್ರೀರಾಮ ನವಮಿ ಆಚರಣೆ ಮುಗಿಸಿಕೊಂಡು ಹೋಗುತ್ತಿದ್ದ ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ್ದ ಅನ್ಯಕೋಮಿನ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಎ1 ಫರ್ಮಾನ್, ಎ2 ಸಮೀರ್ ಹಾಗೂ ಇಬ್ಬರು ಅಪ್ರಾಪ್ತರು. ಇದರಲ್ಲಿ ಮೂವರು ಯುವಕರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಡಿಯೋದಲ್ಲಿರುವ ಓರ್ವ ಹಾಗೂ ಹಲ್ಲೆ ಮಾಡಿದ್ದ ಇಬ್ಬರು ಅರೆಸ್ಟ್ ಆಗಿದ್ದಾರೆ.
ಒಟ್ಟು ನಾಲ್ವರು ಯುವಕರು ಗಲಾಟೆ ಮಾಡಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಈಗಾಗಲೇ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ. ಬಂಧಿತ ಯುವಕರು ಗಾಂಜಾ ನಶೆಯಲ್ಲಿ ಹಲ್ಲೆ ಮಾಡಿದ್ರಾ? ಎಂಬ ಶಂಕೆ ವ್ಯಕ್ತವಾಗಿದೆ.
ಈ ಸುದ್ದಿ ಓದಿದ್ದೀರಾ? : ಜೈ ಶ್ರೀರಾಮ್ ಅನ್ನಂಗಿಲ್ಲಾ, ಓನ್ಲಿ ಅಲ್ಲಾ.. ‘ಅಲ್ಲಾ ಹು ಅಕ್ಬರ್’ ಅನ್ನಬೇಕು : ಅನ್ಯಕೋಮಿನ ಯುವಕರ ಪುಂಡಾಟ
ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಗಲಾಟೆ ಮಾಡಿರಬಹುದು. ಹೀಗಾಗಿ, ಗಾಂಜಾ ಸೇವನೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಪೊಲೀಸರು ಆರೋಪಿಗಳ ಮೆಡಿಕಲ್ ಟೆಸ್ಟ್ಗೆ ಒಳಪಡಿಸಲಿದ್ದಾರೆ. ಸದ್ಯ ಆರೋಪಿಗಳನ್ನು ತೀವ್ರ ವಿಚಾರಣೆ ಒಳಪಡಿಸಲಾಗಿದೆ.