ಹಾಸನ : ಸೈಕಲ್ ಸವಾರನಿಗೆ ಕಾರು ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹಾಸನ ನಗರದ ಡೈರಿ ಸರ್ಕಲ್ ಬಳಿ ನಡೆದಿದೆ.
ಶ್ರೀರಾಮನಗರದ ನಿವಾಸಿ ಆನಂದ್ (60) ಮೃತ ವ್ಯಕ್ತಿ, ಕಾಟಿಹಳ್ಳಿ ಕಡೆಯಿಂದ ವೇಗವಾಗಿ ಬಂದ KA-13-Z-5180 ನಂಬರ್ ಪ್ಲೇಟ್ ಉಳ್ಳ ಹೂಂಡೈ ವೆನ್ಯೂ ಕಾರು, ತಿರುವಿನಲ್ಲಿ ಸೈಕಲ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ: ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಕೇಂದ್ರ ಬಿಜೆಪಿ ನಾಯಕರು ಟಿಕಾಣಿ!
ಈ ಘಟನೆಯೂ ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.