ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆ ಮಂಡ್ಯ ಲೋಕಸಭ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸುತ್ತಿರುವ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಇಂದು ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದರು.
ಮಂಡ್ಯ ಕ್ಷೇತ್ರದದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ, ಪ್ರಜಾಪ್ರಭುತ್ವದಲ್ಲಿ ಯಾರು ಯಾರ ಪರ ಬೇಕಾದರೂ ಪ್ರಚಾರ ಮಾಡಬಹುದು ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡುವಂತದ್ದೇನು ಇಲ್ಲ ಮಂಡ್ಯದಲ್ಲಿ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದರು.
ಇದನ್ನೂ ಓದಿ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ!
ಶಿವಮೊಗ್ಗ ಕ್ಷೇತ್ರದಲ್ಲಿ ಉತ್ತಮವಾಗಿ ಹೊಂದಾಣಿಕೆ ನಡೆದಿದೆ, ಬಿಜೆಪಿ ಅಭ್ಯರ್ಥಿ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಬೇಕು, ರಾಜ್ಯದಲ್ಲಿ 28 ಕ್ಷೇತ್ರಗಳ ಪೈಕಿ 28 ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದರು.
ಇನ್ನು ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಮತ್ತು ಬಿಜೆಪಿ ನಡುವಿನ ಭಿನ್ನಾಭಿಪ್ರಾಯವನ್ನು ಬಿಜೆಪಿ ಹೈಕಮಾಂಡ್ ಬಗೆಹರಿಸಲಿದೆ ಎಂದರು.