ಬೆಂಗಳೂರು : ಜೈ ಶ್ರೀರಾಮ್ ಘೋಷಣೆ ಕೂಗಿದ ಹಿಂದೂ ಯುವಕರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿರುವುದಕ್ಕೆ ಶ್ರೀರಾಮ ಸೇನೆಯ ಸಂಸ್ಥಾಪಕ ಮತ್ತು ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ವಿದ್ಯಾರಣ್ಯಪುರದಲ್ಲಿ ಜೈ ಶ್ರೀರಾಮ್ ಅಂತ ಕೂಗಿದ್ದಕ್ಕೆ ಹಿಂದೂ ಯುವಕರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ. ಈ ಘಟನೆ ಖಂಡನೀಯ ಎಂದು ಮುತಾಲಿಕ್ ಬೇಸರ ಹೊರಹಾಕಿದ್ದಾರೆ.
ಶ್ರೀರಾಮನವಮಿ ತಲಾತಲಾಂತರದಿಂದ ಮಾಡಿಕೊಂಡು ಬಂದಿರುವ ಹಿಂದೂಗಳ ಪದ್ಧತಿ. ಇದನ್ನು ಪ್ರಶ್ನೆ ಮಾಡುವುದಕ್ಕೆ ನೀವ್ಯಾರು? ಮಸೀದಿಗಳ ಮುಂದೆ ಜೈ ಶ್ರೀರಾಮ್ ಘೋಷಣೆ ಕೂಗೋ ಪ್ರಕ್ರಿಯೆ ಶುರು ಮಾಡಬೇಕಾಗುತ್ತೆ ಹುಷಾರ್. ಇದೇ ರೀತಿ ಪುಂಡಾಟಿಕೆ ಮುಂದುವರೆದರೆ ಶ್ರೀರಾಮ ಸೇನೆಯಿಂದ ಬೇರೆ ಬೇರೆ ಪ್ರಕ್ರಿಯೆ ಶುರು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? : ಜೈ ಶ್ರೀರಾಮ್ ಘೋಷಣೆ : ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ್ದ ಅನ್ಯಕೋಮಿನ ಮೂವರು ಬಂಧನ
ಕಠಿಣಾಥಿ ಕಠಿಣ ಶಿಕ್ಷೆ ಕೊಡಬೇಕು
ಈ ಘಟನೆಯನ್ನ ಶ್ರೀರಾಮ ಸೇನೆ ಖಂಡಿಸುತ್ತದೆ. ರಾಮನ ನೆಲದಲ್ಲಿ ಜೈ ಶ್ರೀರಾಮ್ ಅಂತ ಕೂಗದೇ ಇನ್ನೆಲ್ಲಿ ಕೂಗಬೇಕು? ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿರುವ ಮುಸ್ಲಿಂ ಯುವಕರನ್ನ ಬಂಧಿಸಿ, ಕಠಿಣಾಥಿ ಕಠಿಣ ಶಿಕ್ಷೆ ಕೊಡಬೇಕು ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.