ಶಿವಮೊಗ್ಗ : ಇವತ್ತು ಮೆರವಣಿಗೆ ನೋಡಿದ ಮೇಲೆ ಸ್ಪಷ್ಟವಾಗಿ ಗೊತ್ತಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮತ್ತೊಮ್ಮೆ ಮೂರು ಲಕ್ಷಕ್ಕಿಂತ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆಯ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ರಾಜ್ಯದಲ್ಲಿ 28ಕ್ಕೆ 28 ಸೀಟು ಗೆಲ್ಲುತ್ತೇವೆ. ಕೈ ಜೋಡಿಸಿ ಕೇಳುತ್ತೇನೆ, ಮೈ ಮರಿಯಬೇಡಿ ಎಂದು ಕರೆ ಕೊಟ್ಟರು.
ಬೇರೆಯವರು ಶಿವಮೊಗ್ಗ ಚುನಾವಣೆ ನಿಲ್ಲುತ್ತೇನೆ ಅಂತ ಧೈರ್ಯ ಮಾಡಬಾರದು. ಅಂತಹ ಲೀಡ್ ಅನ್ನು ಬಿ.ವೈ. ರಾಘವೇಂದ್ರ ಅವರಿಗೆ ನೀಡಬೇಕು. ಎಲ್ಲರೂ ಒಟ್ಟಾಗಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಬೇಕು. ನಾಮಪತ್ರ ಸಲ್ಲಿಕೆ ಸಮಾರಂಭಕ್ಕೆ ಬಂದವರಿಗೆ ಅಂಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಮುಳುಗಡೆಯ ಮುನ್ಸೂಚನೆ
ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮಾತನಾಡಿ, ಎದುರಾಳಿ ಯಾರಿದ್ದಾರೆ ಎಂದು ನೋಡಲ್ಲ. ಕಾಂಗ್ರೆಸ್ ಸರ್ಕಾರ ಬಂದಾದ ಮೇಲೆ ನೈತಿಕವಾಗಿ ಸಹಕಾರ ಸಿಗುತ್ತಿದೆ. ಹಾಗಾಗಿ, ಇಂತಹ ಕೃತ್ಯಗಳು (ಹಿಂದೂ ಯುವಕರ ಮೇಲೆ ಹಲ್ಲೆ) ನಡೆಯುತ್ತಿದೆ. ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ. ಚುನಾವಣೆ ಮೂಲಕವೇ ಎಲ್ಲದಕ್ಕೂ ಉತ್ತರ ಕೋಡುತ್ತೇವೆ. ಅನೇಕ ಕಾಂಗ್ರೆಸ್ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಮುಳುಗಡೆಯ ಮುನ್ಸೂಚನೆ ಎಂದು ವಾಗ್ದಾಳಿ ನಡೆಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಲಾಯಿತು.
ನನ್ನ ಪತ್ನಿ ಶ್ರೀಮತಿ ತೇಜಸ್ವಿನಿ ರಾಘವೇಂದ್ರ ಹಾಗೂ ಬಿಜೆಪಿ-ಜೆಡಿಎಸ್ ಮುಖಂಡರುಗಳಾದ ಶ್ರೀ @JnanendraAraga ಶ್ರೀ ಭಾನುಪ್ರಕಾಶ್, ಶ್ರಿ ರುದ್ರೇಗೌಡ, ಶ್ರೀ ಹರತಾಳು ಹಾಲಪ್ಪ, ಶ್ರೀಮತಿ ಶಾರದಾ… pic.twitter.com/hqmiiIjdRE
— B Y Raghavendra (Modi Ka Parivar) (@BYRBJP) April 18, 2024