ಹುಬ್ಬಳ್ಳಿ : ಕರ್ನಾಟಕದಲ್ಲಿ ಸಾಬ್ರು ಸರ್ಕಾರ ಅಧಿಕಾರದಲ್ಲಿದೆ. ಈ ಸಾಬ್ರು ಸರ್ಕಾರ ಹೋಗಬೇಕು ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಇವರಿಗೆ ಒಂದೇ ಒಂದು ಉತ್ತರ. ಜೆಸಿಬಿ, ಎನ್ಕೌಂಟರ್ ಅಷ್ಟೇ ಎಂದು ಕಿಡಿಕಾರಿದರು.
ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬೇಕು. ಲೋಕಸಭಾ ಚುನಾವಣೆ ಮುಗಿದ ನಂತರ ಈ ಸರ್ಕಾರ ಇರಲ್ಲ. ಸಿದ್ದರಾಮಯ್ಯನವರನ್ನು ಕೆಳಗಿಳಿಸಲು ಡಿ.ಕೆ. ಶಿವಕುಮಾರ್ ಅಂಡ್ ಕಂಪನಿ ಪ್ರಯತ್ನಿಸುತ್ತಿದೆ. ಈ ಸರ್ಕಾರ ಬೀಳುತ್ತೆ, ರಾಜ್ಯದಲ್ಲಿ ಮತ್ತೊಮ್ಮೆ ಚುನಾವಣೆ ಆಗುತ್ತೆ. ನಿಮ್ಮೆಲ್ಲರ ಆಶೀರ್ವಾದ ಇದ್ದರೆ ಬುಲ್ಡೋಜರ್ ಬಾಬಾ ತರದವರು ಸಿಎಂ ಆಗುತ್ತಾರೆ ಎಂದು ಹೇಳಿದರು.
ಉತ್ತರ ಕರ್ನಾಟಕದ ಮುಖ್ಯಮಂತ್ರಿ ಆಗುತ್ತಾರೆ
ಈ ಬಾರಿ ಮತ್ತೆ ಉತ್ತರ ಕರ್ನಾಟಕದ ಮುಖ್ಯಮಂತ್ರಿ ಆಗುತ್ತಾರೆ. ಯಾರು ಏನೇ ಲಾಗಾ ಹೊಡೆದರೂ ಏನೂ ಆಗಲ್ಲ . ಮುಸ್ಲಿಮರ ಮೀಸಲಾತಿಯನ್ನು ತೆಗೆಯುತ್ತೇವೆ ಅಂತ ಅಮಿತ್ ಶಾ ಹೇಳಿದ್ದಾರೆ. ಎಸ್ಸಿ, ಎಸ್ಟಿ, ಲಿಂಗಾಯಿತರಿಗೆ ಮೀಸಲಾತಿ ಹಂಚಿಕೊಡುತ್ತೇವೆ ಅಂತ ಹೇಳಿದ್ದಾರೆ. ಧಾರವಾಡದಲ್ಲಿ ಲಿಂಗಾಯತ, ಲಿಂಗಾಯತ ಅಂತ ಹೇಳುತ್ತಿದ್ದವರು ಈಗ ಮನೆಗೆ ಹೋಗಿದ್ದಾರೆ ಎಂದು ಕುಟುಕಿದರು.
ಕರ್ನಾಟಕದಲ್ಲಿ ಬುಲ್ಡೋಜರ್ ಬಾಬಾ ತರುತ್ತೇವೆ
ಒಬ್ಬ ನಾಮಪತ್ರ ಹಿಂದೆ ತೆಗೆದುಕೊಂಡಿದ್ದಾನೆ. ಈಗ ಪ್ರಲ್ಹಾದ್ ಜೋಶಿಯವರನ್ನು ಆಶೀರ್ವಾದ ಮಾಡುತ್ತೇನೆ ಬನ್ನಿ ಅಂತ ಕರೆಯುತ್ತಿದ್ದಾನೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೆಸರು ಪ್ರಸ್ತಾಪಿಸದೆ ವಾಗ್ದಾಳಿ ನಡೆಸಿದರು. ನಮಗೆ ಬೇಕಾಗಿದ್ದು ಹಿಂದೂ ರಾಷ್ಟ್ರ. ಸಾಬರನ್ನ ಕಿತ್ತು ಹಾಕಲು ನಮ್ಮ ರಾಷ್ಟ್ರದಲ್ಲಿ ನರೇಂದ್ರ ಮೋದಿ ಪ್ರಧಾನಿ ಆಗಬೇಕು. ಕರ್ನಾಟಕದಲ್ಲಿ ಬುಲ್ಡೋಜರ್ ಬಾಬಾ ತರುತ್ತೇವೆ, ಅದಕ್ಕೆ ನಿಮ್ಮ ಆಶೀರ್ವಾದ ಇರಬೇಕು ಎಂದು ಶಾಸಕ ಯತ್ನಾಳ್ ತಿಳಿಸಿದರು.