ದೊಡ್ಡಬಳ್ಳಾಪುರ : ಹಣಕಾಸಿನ ವಿಚಾರಕ್ಕೆ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಶುಕ್ರವಾರ ರಾತ್ರಿ ಘಟನೆ ನಡೆದಿದೆ.
ಹೇಮಂತ್ ಕುಮಾರ್( 27) ಕೊಲೆಯಾದ ದುರ್ದೈವಿ, ನಡುರಸ್ತೆಯಲ್ಲಿ ಮಿಟ್ಟೆ ಅಲಿಯಾಸ್ ನರಸಿಂಹಮೂರ್ತಿ ಗ್ಯಾಂಗ್ನಿಂದ ಹೇಮಂತ್ ಮೇಲೆ ಮಾರಕಾಸ್ತ್ರಗಳಿಂದ ಕುತ್ತಿಗೆ, ಎದೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.
ಇದನ್ನೂ ಓದಿ: ಹತ್ತನೇ ತರಗತಿ ವಿದ್ಯಾರ್ಥಿನಿ ರುಂಡ ಕತ್ತರಿಸಿ ಕೊಲೆ ಮಾಡಿದ್ದ ಆರೋಪಿ ಬಂಧನ
ಮೃತ ಹೇಮಂತ್ ಮೇಲೆ 10ಕ್ಕೂ ಹೆಚ್ಚು ಯುವಕರಿಂದ ಈ ದಾಳಿ ನಡೆದಿದ್ದು, ಕೊಲೆ ಮಾಡಿ ರಸ್ತೆ ಬದಿಯಲ್ಲಿ ಶವ ಎಸೆದು ಎಸ್ಕೇಪ್ ಆಗಿದ್ದಾರೆ. ಶನಿವಾರ ಮುಂಜಾನೆ ಸ್ಥಳೀಯರು ವಾಕಿಂಗ್ ಮಾಡುವಾಗ ಮೃತ ದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.