ಕಲಬುರಗಿ: ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ ಕಲಬುರ್ಗಿ ನಗರದ ಹಾಗರಗಾ ಕ್ರಾಸ್ ಬಳಿಯ ನಿವಾಸದಲ್ಲಿ ನಡೆದಿದೆ.
ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದ ನಿವಾಸಿ ಅರ್ಜುನ್ ಮಡಿವಾಳ ಸೇರಿದಂತೆ ಮೂವರ ಮೇಲೆ ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಸೇರಿ ಹಲವು ದುಷ್ಕರ್ಮಿಗಳು ಹಲ್ಲೆ ಮಾಡಿ ಹಣ ಹಾಕಿಸಿಕೊಂಡು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಇದನ್ನು ಓದಿ: ದೊಡ್ಡಬಳ್ಳಾಪುರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
ಕಲಬುರಗಿ ನಗರದ ಹಾಗರಹಾ ಕ್ರಾಸ್ ಬಳಿಯ ಮನೆಯ ಬಳಿ ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸಲು ಬಂದಾಗ ಈ ಮೂವರನ್ನು ಕೂಡಿಹಾಕಿದ ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಗ್ಯಾಂಗ್ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿ ಬಳಿಕ ಹಣಕ್ಕಾಗಿ ಬೇಡಿಕೆ ಇಟ್ಟು ಹಣಪಡೆದಿದ್ದಾರೆ. ಬಳಿಕ ಮತ್ತಷ್ಟು ಹಣ ನೀಡುವಂತೆ ಒತ್ತಡಹಾಕಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಚಿತ್ರಹಿಂಸೆ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಕಲಬುರ್ಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು
ಆರೋಪಿಗಳ ಬಂಧನ ಮಾಡಿದ್ದಾರೆ.