ಬೆಂಗಳೂರು : ಪರೀಕ್ಷೆಗೆ ಲೇಟ್ ಆಗಿ ಬಂದಿದ್ದಕ್ಕೆ ಕಾಲೇಜಿನಲ್ಲಿ ವಿದ್ಯಾರ್ಥಿಯನ್ನ ನಿಂದಿಸಿದ್ದಾರೆ. ಈ ವೇಳೆ ಮನನೊಂದ ವಿದ್ಯಾರ್ಥಿ 5ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಕಾಲೇಜ್ನಲ್ಲಿ ಈ ದುರ್ಘಟನೆ ನಡೆದಿದೆ. ಕಾಲೇಜಿನ ಸಮಯದಲ್ಲೇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಿ. ರಾಹುಲ್ ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ಈತ ಐದನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದ. ಈತ ಮೂಲತಃ ಆಂಧ್ರಪ್ರದೇಶದ ಕರ್ನೂನ್ನವನು ಎನ್ನಲಾಗಿದೆ. ಇನ್ನು ಈತನ ಪೋಷಕರು ಕೆಲ ವರ್ಷಗಳಿಂದ ಬಳ್ಳಾರಿಯಲ್ಲಿ ನೆಲೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? : ನನ್ನ ಮಗಳನ್ನ ಕೊಂದ ಆರೋಪಿಯನ್ನ ಎನ್ಕೌಂಟರ್ ಮಾಡಿದ್ದರೆ ಹೀಗೆ ಆಗ್ತಿರಲಿಲ್ಲ : ನಿರಂಜನ ಹಿರೇಮಠ
ಮೃತ ರಾಹುಲ್ ನಿನ್ನೆ ನಡೆದ ಪರೀಕ್ಷೆಗೆ ತಡವಾಗಿ ಬಂದಿದ್ದನು. ಈ ವಿಚಾರವಾಗಿ ವಿಧ್ಯಾರ್ಥಿಯನ್ನ ಕಾಲೇಜಿನಲ್ಲಿ ನಿಂದಿಸಿದ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದು ಆತ ಕೆಲ ಸಮಯದ ಬಳಿಕ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.